<p><strong>ಬೆಂಗಳೂರು:</strong> ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳು ಬಾಕಿ ಇರಿಸಿಕೊಂಡಿರುವ ವಿದ್ಯಾರ್ಥಿ ವೇತನ ಮತ್ತು ಶೈಕ್ಷಣಿಕ ಪ್ರೋತ್ಸಾಹಧನದ ಮೊತ್ತವನ್ನು ತಕ್ಷಣ ಬಿಡುಗಡೆ ಮಾಡುವಂತೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶಿಸಿದ್ದಾರೆ.</p>.<p>ಎರಡೂ ಇಲಾಖೆಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಬೇಕಿರುವ ವಿದ್ಯಾರ್ಥಿವೇತನ ಮತ್ತು ಪ್ರೋತ್ಸಾಹಧನಗಳನ್ನು ಬಾಕಿ ಇರಿಸಿಕೊಂಡಿರುವ ಕುರಿತು ದೂರುಗಳು ಕೇಳಿಬಂದಿದ್ದವು. ಈ ಸಂಬಂಧ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ಮಂಗಳವಾರ ಸಭೆ ನಡೆಸಿದ ಸಚಿವರು, ತಕ್ಷಣ ಬಾಕಿ ಪಾವತಿಸುವಂತೆ ನಿರ್ದೇಶನ ನೀಡಿದರು.</p>.<p>ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಚಿವರು, ‘ಸಮಾಜ ಕಲ್ಯಾಣ ಇಲಾಖೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ 2020–21ನೇ ಸಾಲಿನ ಪ್ರೋತ್ಸಾಹ ಧನ ₹ 55 ಕೋಟಿ ಪಾವತಿ ಬಾಕಿ ಇದೆ. ಅದನ್ನು ತಕ್ಷಣ ಬಿಡುಗಡೆ ಮಾಡುವಂತೆ ಆದೇಶಿಸಿದ್ದೇನೆ’ ಎಂದರು.</p>.<p>ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿಯಲ್ಲಿ ಶೇಕಡ 60 ರಿಂದ 70ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾದರೆ ₹ 2,000 ಮತ್ತು ಶೇ 70ಕ್ಕಿಂತ ಹೆಚ್ಚು ಅಂಕಗಳೊಂದಿಗೆ ಉತ್ತೀರ್ಣರಾದರೆ ತಲಾ ₹ 15,000 ಪ್ರೋತ್ಸಾಹ ಧನ ನೀಡಲಾಗುತ್ತಿದೆ ಎಂದು ತಿಳಿಸಿದರು.</p>.<p>ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ 1.90 ಲಕ್ಷ ವಿದ್ಯಾರ್ಥಿಗಳಿಗೆ 2019–20 ಮತ್ತು 2020–21ನೇ ಸಾಲಿನ ಪ್ರೋತ್ಸಾಹ ಧನ ಹಾಗೂ ವಿದ್ಯಾರ್ಥಿವೇತನ ಪಾವತಿ ಬಾಕಿ ಇದೆ. ಈ ಮೊತ್ತವನ್ನು ವಾರದೊಳಗೆ ಬಿಡುಗಡೆ ಮಾಡಿ, ವಿದ್ಯಾರ್ಥಿಗಳಿಗೆ ಪಾವತಿಸಲು ಕ್ರಮ ಕೈಗೊಳ್ಳುವಂತೆ ಆದೇಶಿಸಲಾಗಿದೆ ಎಂದರು.</p>.<p class="Subhead"><strong>ಖಾಸಗಿ ಕೋಟಾದವರಿಗೂ ವಿದ್ಯಾರ್ಥಿ ವೇತನ:</strong> ಎಂಜಿನಿಯರಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್ಗಳಲ್ಲಿ ಪ್ರವೇಶ ಪಡೆದಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳು ತಮಗೂ ಇಲಾಖೆಯಿಂದ ವಿದ್ಯಾರ್ಥಿವೇತನ ನೀಡುವಂತೆ ಮನವಿ ಸಲ್ಲಿಸಿದ್ದರು. ಈವರೆಗೂ ಖಾಸಗಿ ಕೋಟಾದವರಿಗೆ ಈ ಸೌಲಭ್ಯವಿರಲಿಲ್ಲ. ಮಾನವೀಯ ನೆಲೆಗಟ್ಟಿನಲ್ಲಿ ಅವರಿಗೂ ವಿದ್ಯಾರ್ಥಿವೇತನ ನೀಡಲು ತೀರ್ಮಾನಿಸಲಾಗಿದೆ ಎಂದು ಶ್ರೀನಿವಾಸ ಪೂಜಾರಿ ತಿಳಿಸಿದರು.</p>.<p>ಪ್ರತಿ ವಿದ್ಯಾರ್ಥಿಗೆ ₹ 1 ಲಕ್ಷದವರೆಗೂ ವಿದ್ಯಾರ್ಥಿವೇತನ ದೊರೆಯಲಿದೆ. ಇದಕ್ಕಾಗಿ ₹ 9 ಕೋಟಿಯಷ್ಟು ಹೆಚ್ಚುವರಿ ವೆಚ್ಚವಾಗಲಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳು ಬಾಕಿ ಇರಿಸಿಕೊಂಡಿರುವ ವಿದ್ಯಾರ್ಥಿ ವೇತನ ಮತ್ತು ಶೈಕ್ಷಣಿಕ ಪ್ರೋತ್ಸಾಹಧನದ ಮೊತ್ತವನ್ನು ತಕ್ಷಣ ಬಿಡುಗಡೆ ಮಾಡುವಂತೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶಿಸಿದ್ದಾರೆ.</p>.<p>ಎರಡೂ ಇಲಾಖೆಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಬೇಕಿರುವ ವಿದ್ಯಾರ್ಥಿವೇತನ ಮತ್ತು ಪ್ರೋತ್ಸಾಹಧನಗಳನ್ನು ಬಾಕಿ ಇರಿಸಿಕೊಂಡಿರುವ ಕುರಿತು ದೂರುಗಳು ಕೇಳಿಬಂದಿದ್ದವು. ಈ ಸಂಬಂಧ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ಮಂಗಳವಾರ ಸಭೆ ನಡೆಸಿದ ಸಚಿವರು, ತಕ್ಷಣ ಬಾಕಿ ಪಾವತಿಸುವಂತೆ ನಿರ್ದೇಶನ ನೀಡಿದರು.</p>.<p>ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಚಿವರು, ‘ಸಮಾಜ ಕಲ್ಯಾಣ ಇಲಾಖೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ 2020–21ನೇ ಸಾಲಿನ ಪ್ರೋತ್ಸಾಹ ಧನ ₹ 55 ಕೋಟಿ ಪಾವತಿ ಬಾಕಿ ಇದೆ. ಅದನ್ನು ತಕ್ಷಣ ಬಿಡುಗಡೆ ಮಾಡುವಂತೆ ಆದೇಶಿಸಿದ್ದೇನೆ’ ಎಂದರು.</p>.<p>ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿಯಲ್ಲಿ ಶೇಕಡ 60 ರಿಂದ 70ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾದರೆ ₹ 2,000 ಮತ್ತು ಶೇ 70ಕ್ಕಿಂತ ಹೆಚ್ಚು ಅಂಕಗಳೊಂದಿಗೆ ಉತ್ತೀರ್ಣರಾದರೆ ತಲಾ ₹ 15,000 ಪ್ರೋತ್ಸಾಹ ಧನ ನೀಡಲಾಗುತ್ತಿದೆ ಎಂದು ತಿಳಿಸಿದರು.</p>.<p>ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ 1.90 ಲಕ್ಷ ವಿದ್ಯಾರ್ಥಿಗಳಿಗೆ 2019–20 ಮತ್ತು 2020–21ನೇ ಸಾಲಿನ ಪ್ರೋತ್ಸಾಹ ಧನ ಹಾಗೂ ವಿದ್ಯಾರ್ಥಿವೇತನ ಪಾವತಿ ಬಾಕಿ ಇದೆ. ಈ ಮೊತ್ತವನ್ನು ವಾರದೊಳಗೆ ಬಿಡುಗಡೆ ಮಾಡಿ, ವಿದ್ಯಾರ್ಥಿಗಳಿಗೆ ಪಾವತಿಸಲು ಕ್ರಮ ಕೈಗೊಳ್ಳುವಂತೆ ಆದೇಶಿಸಲಾಗಿದೆ ಎಂದರು.</p>.<p class="Subhead"><strong>ಖಾಸಗಿ ಕೋಟಾದವರಿಗೂ ವಿದ್ಯಾರ್ಥಿ ವೇತನ:</strong> ಎಂಜಿನಿಯರಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್ಗಳಲ್ಲಿ ಪ್ರವೇಶ ಪಡೆದಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳು ತಮಗೂ ಇಲಾಖೆಯಿಂದ ವಿದ್ಯಾರ್ಥಿವೇತನ ನೀಡುವಂತೆ ಮನವಿ ಸಲ್ಲಿಸಿದ್ದರು. ಈವರೆಗೂ ಖಾಸಗಿ ಕೋಟಾದವರಿಗೆ ಈ ಸೌಲಭ್ಯವಿರಲಿಲ್ಲ. ಮಾನವೀಯ ನೆಲೆಗಟ್ಟಿನಲ್ಲಿ ಅವರಿಗೂ ವಿದ್ಯಾರ್ಥಿವೇತನ ನೀಡಲು ತೀರ್ಮಾನಿಸಲಾಗಿದೆ ಎಂದು ಶ್ರೀನಿವಾಸ ಪೂಜಾರಿ ತಿಳಿಸಿದರು.</p>.<p>ಪ್ರತಿ ವಿದ್ಯಾರ್ಥಿಗೆ ₹ 1 ಲಕ್ಷದವರೆಗೂ ವಿದ್ಯಾರ್ಥಿವೇತನ ದೊರೆಯಲಿದೆ. ಇದಕ್ಕಾಗಿ ₹ 9 ಕೋಟಿಯಷ್ಟು ಹೆಚ್ಚುವರಿ ವೆಚ್ಚವಾಗಲಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>