'ಹಿಂದೆ ಮುಂಬೈನಲ್ಲಿ ಹಿಂದೂಗಳ ಮೇಲೆ ದಬ್ಬಾಳಿಕೆ ನಡೆಯುತ್ತಿತ್ತು. ಆ ದಬ್ಬಾಳಿಕೆ ತಡೆಯುವ ನಿಟ್ಟಿನಲ್ಲಿ ಬಾಳಾಸಾಹೇಬ್ ಠಾಕ್ರೆ ಅವರು ಬಲಿಷ್ಠ ಶಿವಸೇನೆ ಕಟ್ಟಿದ್ದರು. ಶಿವಸೇನೆ, ಕಾಂಗ್ರೆಸ್ ಎಂದಿಗೂ ಸೇರಲು ಸಾಧ್ಯವಿಲ್ಲ. ಬಾಳಾಸಾಹೇಬ್ ಅವರು ಇದ್ದಿದ್ದರೆ ಇಂಥ ಅಚಾತುರ್ಯಕ್ಕೆ ಆಸ್ಪದ ಕೊಡುತ್ತಿರಲಿಲ್ಲ. ಅಧಿಕಾರದ ಆಸೆಗೆ ಉದ್ಧವ್ ಠಾಕ್ರೆ ಕಾಂಗ್ರೆಸ್ ಜತೆಗೆ ಕೈಜೋಡಿಸಿದರು. ಪರಿಣಾಮ ಅವರದೇ ಪಕ್ಷದ ಶಾಸಕರು ತಿರುಗಿಬಿದ್ದಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ತತ್ವ, ಸಿದ್ಧಾಂತ ಇಲ್ಲ. ಇಂಥ ಪಕ್ಷದ ಜತೆಗೆ ಒಂದಾದವರು ದಿವಾಳಿಯಾಗಿದ್ದು ಇತಿಹಾಸದುದ್ದಕ್ಕೂ ನಡೆದುಬಂದಿದೆ'ಎಂದು ಮೂದಲಿಸಿದರು.