ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರ್ಗಾವಣೆಗೆ ಕೋಟಿ ರೂ. ಲಂಚ ಕೇಳಿದ ಆರೋಪ: ತನಿಖೆಗೆ ಆದೇಶಿಸಿದ ಸಚಿವ

Last Updated 22 ಡಿಸೆಂಬರ್ 2020, 10:40 IST
ಅಕ್ಷರ ಗಾತ್ರ

ಬೆಂಗಳೂರು: ಅಬಕಾರಿ ಇಲಾಖೆಯ ಜಂಟಿ‌ ಆಯುಕ್ತರೊಬ್ಬರ ವರ್ಗಾವಣೆಗೆ ಕೋಟಿ ರೂಪಾಯಿ ಲಂಚ ಕೇಳಿದ ಆರೋಪ ಕುರಿತು ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಆದೇಶಿಸಲಾಗಿದೆ ಎಂದು ಅಬಕಾರಿ ಸಚಿವ ನಾಗೇಶ್ ತಿಳಿಸಿದರು.

ವಿಧಾನಸೌಧದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಮೋಹನ್ ಕುಮಾರ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರ ಮಗಳು ಸ್ನೇಹಾಗೆ ದೂರು ನೀಡುವುದು ಹವ್ಯಾಸ ಆಗಿದೆ' ಎಂದರು.

ಪರಿಶಿಷ್ಟ ಜಾತಿಯ‌ ಸಚಿವ ಎಂಬ ಕಾರಣಕ್ಕೆ ತಮ್ಮ ವಿರುದ್ಧ ಆರೋಪ ಮಾಡಲಾಗುತ್ತಿದೆ. ಇಲಾಖೆಯಲ್ಲಿ ಭ್ರಷ್ಟಾಚಾರಕ್ಕೆ ಅವಕಾಶ ನೀಡಿಲ್ಲ. ಲಂಚಕ್ಕೆ ಬೇಡಿಕೆ ಇಟ್ಟಿಲ್ಲ ಎಂದು ಪ್ರಮಾಣ ಮಾಡಲು ಸಿದ್ಧ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT