ಆಲೆಟ್ಟಿ– ಕೂಟೇಲು ಸಂಪರ್ಕ ರಸ್ತೆ ಹಲವಾರು ವರ್ಷಗಳಿಂದ ದುಃಸ್ಥಿತಿಯಲ್ಲಿದ್ದು, ಕಳೆದ ಚುನಾವಣೆ ಸಂದರ್ಭದಲ್ಲಿ ಸ್ಥಳೀಯರು ಮತದಾನ ಬಹಿಷ್ಕರಿಸಿದ್ದರು. ಆ ವೇಳೆ ಅಂಗಾರ ಸ್ಥಳಕ್ಕೆ ತೆರಳಿ, ಮುಂದಿನ ಬಾರಿ ರಸ್ತೆ ಅಭಿವೃದ್ಧಿಗೊಳಿಸುವ ಭರವಸೆ ನೀಡಿದ್ದರು. ಎರಡನೇ ಬಾರಿ ಸಚಿವ ಸ್ಥಾನ ಪಡೆದು, ಕ್ಷೇತ್ರದ ಸಮಸ್ಯೆಗಳನ್ನು ಆಲಿಸಲು, ಇದೇ ರಸ್ತೆಯಲ್ಲಿ ತೆರಳುತ್ತಿದ್ದಾಗ ಜೀಪ್ ರಸ್ತೆ ನಡುವೆ ಬಾಕಿಯಾಯಿತು.