ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಾಯುಕ್ತ ಬುಡಮೇಲು ಮಾಡಿದ ಸಿದ್ದರಾಮಯ್ಯ: ಕೋಟ ಶ್ರೀನಿವಾಸ ಪೂಜಾರಿ

Last Updated 5 ಮೇ 2022, 11:36 IST
ಅಕ್ಷರ ಗಾತ್ರ

ಬೆಂಗಳೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಲೋಕಾಯುಕ್ತವನ್ನು ಬುಡಮೇಲು ಮಾಡಿ ಎಸಿಬಿಯನ್ನು ಸ್ಥಾಪಿಸಿದರು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಆರೋಪಿಸಿದರು.

ಸುದ್ದಿಗಾರರ ಜತೆ ಗುರುವಾರ ಮಾತನಾಡಿದ ಅವರು,‘ಸಿದ್ದರಾಮಯ್ಯನವರೇ ನಿಮ್ಮ ಅವಧಿಯಲ್ಲಿ ಆದ ಎಷ್ಟು ಅಕ್ರಮಗಳ ತನಿಖೆ ಮಾಡಿದ್ದೀರಿ’ ಎಂದೂ ಪ್ರಶ್ನಿಸಿದರು.

ಪಿಎಸ್‍ಐ ನೇಮಕಾತಿ ಅಕ್ರಮ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ‘ದೋಷಿಗಳು ಮತ್ತು ನಿರ್ದೋಷಿಗಳನ್ನು ತನಿಖಾ ಸಂಸ್ಥೆಗಳು ನಿರ್ಧರಿಸುತ್ತವೆ’ ಎಂದರು.

ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷದವರ ಅಪಪ್ರಚಾರದ ಹೊರತಾಗಿಯೂ ರಾಜ್ಯದಲ್ಲಿರುವ ದಲಿತರು, ಹಿಂದುಳಿದವರು ಮತ್ತು ಪರಿಶಿಷ್ಟ ಜಾತಿ, ಪಂಗಡದವರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ. ಇದರಿಂದ ಹತಾಶರಾಗಿರುವ ಕಾಂಗ್ರೆಸ್‍ನವರು ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT