<p><strong>ಧಾರವಾಡ:</strong> ‘ಮುಖ್ಯಮಂತ್ರಿ ದೆಹಲಿಗೆ ಏಕೆ ಹೋಗಿದ್ದಾರೋ ಗೊತ್ತಿಲ್ಲ. ಆದರೆ ದೆಹಲಿಯಿಂದ ಖಂಡಿತ ಒಳ್ಳೆ ಸುದ್ದಿ ಬರುತ್ತೆ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಭಾನುವಾರ ಇಲ್ಲಿ ಹೇಳಿದರು.</p>.<p>ಜಿಲ್ಲಾ ಪಂಚಾಯ್ತಿಯ ಪ್ರಗತಿ ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೆಹಲಿ ನಾಯಕರು ಕರ್ನಾಟಕದ ಹಿತದೃಷ್ಟಿಯಿಂದ ಒಳ್ಳೆಯದನ್ನೇ ಮಾಡಿ ಕಳುಹಿಸುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ಎಲ್ಲಾ ಶಾಸಕರಿಗೂ ಮಂತ್ರಿ ಆಗುವ ಬಯಕೆ ಇರುತ್ತದೆ. ಆದರೆ ಅದಕ್ಕೊಂದು ಮಿತಿ ಇರಬೇಕು. ಬಿಜೆಪಿಗೆ ಪೂರ್ಣ ಬಹುಮತ ಸಿಕ್ಕಿದ್ದರೆ ಈ ಸ್ಥಿತಿ ಬರುತ್ತಿರಲಿಲ್ಲ. ಜೆಡಿಎಸ್ ಹಾಗೂ ಕಾಂಗ್ರೆಸ್ನಿಂದ ಪಕ್ಷಕ್ಕೆ ಹಲವು ಬಂದಿದ್ದಾರೆ. ಅವರ ಋಣ ತೀರಿಸಬೇಕಿದೆ. ಪಕ್ಷಕ್ಕೆ ಸೇರಿದವರೆಲ್ಲರೂ ಬಿಜೆಪಿ ಕಾರ್ಯಕರ್ತರಾಗಿದ್ದಾರೆ. ಅವರು ಹೊರಗಿನಿಂದ ಬಂದವರು ಎಂದು ನಮಗೆ ಅನಿಸುತ್ತಿಲ್ಲ’ ಎಂದರು.</p>.<p>ಸಂಕ್ರಾಂತಿ ನಂತರ ಬದಲಾವಣೆ ಎಂಬ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿದ ಈಶ್ವರಪ್ಪ, ‘ಲಿಂಗಾಯತ ಸಮಾಜದ ಮೀಸಲಾತಿ ಕುರಿತು ಅವರು ಆ ಹೇಳಿಕೆ ನೀಡಿದ್ದಾರಂತೆ. ಆದರೆ ಅವರ ಹಿಂದಿನ ಹೇಳಿಕೆಗಳ ಕುರಿತು ಈಗಾಗಲೇ ಶಿಸ್ತು ಕ್ರಮಕ್ಕೆ ಪಕ್ಷದ ರಾಜ್ಯಾಧ್ಯಕ್ಷರು ಕೇಂದ್ರಕ್ಕೆ ಶಿಫಾರಸು ಮಾಡಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ಮುಖ್ಯಮಂತ್ರಿ ದೆಹಲಿಗೆ ಏಕೆ ಹೋಗಿದ್ದಾರೋ ಗೊತ್ತಿಲ್ಲ. ಆದರೆ ದೆಹಲಿಯಿಂದ ಖಂಡಿತ ಒಳ್ಳೆ ಸುದ್ದಿ ಬರುತ್ತೆ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಭಾನುವಾರ ಇಲ್ಲಿ ಹೇಳಿದರು.</p>.<p>ಜಿಲ್ಲಾ ಪಂಚಾಯ್ತಿಯ ಪ್ರಗತಿ ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೆಹಲಿ ನಾಯಕರು ಕರ್ನಾಟಕದ ಹಿತದೃಷ್ಟಿಯಿಂದ ಒಳ್ಳೆಯದನ್ನೇ ಮಾಡಿ ಕಳುಹಿಸುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ಎಲ್ಲಾ ಶಾಸಕರಿಗೂ ಮಂತ್ರಿ ಆಗುವ ಬಯಕೆ ಇರುತ್ತದೆ. ಆದರೆ ಅದಕ್ಕೊಂದು ಮಿತಿ ಇರಬೇಕು. ಬಿಜೆಪಿಗೆ ಪೂರ್ಣ ಬಹುಮತ ಸಿಕ್ಕಿದ್ದರೆ ಈ ಸ್ಥಿತಿ ಬರುತ್ತಿರಲಿಲ್ಲ. ಜೆಡಿಎಸ್ ಹಾಗೂ ಕಾಂಗ್ರೆಸ್ನಿಂದ ಪಕ್ಷಕ್ಕೆ ಹಲವು ಬಂದಿದ್ದಾರೆ. ಅವರ ಋಣ ತೀರಿಸಬೇಕಿದೆ. ಪಕ್ಷಕ್ಕೆ ಸೇರಿದವರೆಲ್ಲರೂ ಬಿಜೆಪಿ ಕಾರ್ಯಕರ್ತರಾಗಿದ್ದಾರೆ. ಅವರು ಹೊರಗಿನಿಂದ ಬಂದವರು ಎಂದು ನಮಗೆ ಅನಿಸುತ್ತಿಲ್ಲ’ ಎಂದರು.</p>.<p>ಸಂಕ್ರಾಂತಿ ನಂತರ ಬದಲಾವಣೆ ಎಂಬ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿದ ಈಶ್ವರಪ್ಪ, ‘ಲಿಂಗಾಯತ ಸಮಾಜದ ಮೀಸಲಾತಿ ಕುರಿತು ಅವರು ಆ ಹೇಳಿಕೆ ನೀಡಿದ್ದಾರಂತೆ. ಆದರೆ ಅವರ ಹಿಂದಿನ ಹೇಳಿಕೆಗಳ ಕುರಿತು ಈಗಾಗಲೇ ಶಿಸ್ತು ಕ್ರಮಕ್ಕೆ ಪಕ್ಷದ ರಾಜ್ಯಾಧ್ಯಕ್ಷರು ಕೇಂದ್ರಕ್ಕೆ ಶಿಫಾರಸು ಮಾಡಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>