ಸಂಕ್ರಾಂತಿ ನಂತರ ಬದಲಾವಣೆ ಎಂಬ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿದ ಈಶ್ವರಪ್ಪ, ‘ಲಿಂಗಾಯತ ಸಮಾಜದ ಮೀಸಲಾತಿ ಕುರಿತು ಅವರು ಆ ಹೇಳಿಕೆ ನೀಡಿದ್ದಾರಂತೆ. ಆದರೆ ಅವರ ಹಿಂದಿನ ಹೇಳಿಕೆಗಳ ಕುರಿತು ಈಗಾಗಲೇ ಶಿಸ್ತು ಕ್ರಮಕ್ಕೆ ಪಕ್ಷದ ರಾಜ್ಯಾಧ್ಯಕ್ಷರು ಕೇಂದ್ರಕ್ಕೆ ಶಿಫಾರಸು ಮಾಡಿದ್ದಾರೆ’ ಎಂದರು.