ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದಿಯಲ್ಲಿ ಮಾತನಾಡುವವರಿಗೆ ಪ್ರತಿಕ್ರಿಯಿಸಲ್ಲ: ಮುರುಗೇಶ್ ನಿರಾಣಿ

Last Updated 30 ಜೂನ್ 2021, 21:38 IST
ಅಕ್ಷರ ಗಾತ್ರ

ಬೆಂಗಳೂರು: ‘ಹಾದಿಬೀದಿಯಲ್ಲಿ ಮಾತನಾಡುವವರಿಗೆ ನಾನು ಉತ್ತರ ಕೊಡುವುದಿಲ್ಲ’ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಸಮಾಜದ ಬಗ್ಗೆ ಮಾತನಾಡು ವುದಿಲ್ಲ. ವೀರಶೈವ ಲಿಂಗಾಯತ ಸಮಾಜ ಪ್ರಜ್ಞಾವಂತ ಸಮಾಜ’ ಎಂದರು.

‘ಪಂಚಮಸಾಲಿ ಹೋರಾಟವನ್ನು ಯಾರು ದುರ್ಬಳಕೆ ಮಾಡಿದ್ದಾರೆ ಎಂಬುದು ಚುನಾವಣೆಯಲ್ಲಿ ನಿರ್ಧಾರವಾಗಲಿದೆ. ಪಂಚಮಸಾಲಿ ಅಷ್ಟೇ ಅಲ್ಲ, ಇಡೀ ವೀರಶೈವ ಲಿಂಗಾಯತ ಹೋರಾಟದ ಬಗ್ಗೆ ನಾವು ಹೋರಾಟ ಮಾಡಬೇಕಾಗುತ್ತದೆ. ಇಡೀ ಸಮುದಾಯದಲ್ಲಿ ಆರ್ಥಿಕವಾಗಿಹಿಂದುಳಿದವರಿದ್ದಾರೆ, ಸಣ್ಣಸಣ್ಣ ಜಾತಿಗಳಿವೆ. ಅವುಗಳೆಲ್ಲದರ ಬಗ್ಗೆ ಅಧಿಕಾರದಲ್ಲಿ ಇರುವವರು ಗಮನ ಹರಿಸಬೇಕು’ ಎಂದು ಮುರುಗೇಶ್ ನಿರಾಣಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT