ಒಂದು ಕಂದಾಯ ವಿಭಾಗದ ಎರಡು ಜಿಲ್ಲಾ ಆಸ್ಪತ್ರೆಗಳಲ್ಲಿ ಹಾಗೂ ಕರಾವಳಿ ಭಾಗದ ಎರಡು ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪಿಸಲಾಗುವುದು. ಯಾವ ಜಿಲ್ಲೆಗೆ ತುರ್ತು ಆಗತ್ಯವಿದೆ ಎಂಬುದರ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಚರ್ಚಿಸಿ, ತೀರ್ಮಾನ ಕೈಗೊಳ್ಳುವ ಹೊಣೆಯನ್ನು ಇಲಾಖೆಯ ವಿಭಾಗದ ಮಟ್ಟದ ಸಮಿತಿಗೆ ನೀಡಲಾಗಿದೆ ಎಂದು ವಿವರಿಸಿದರು.