ಶುಕ್ರವಾರ, ಮಾರ್ಚ್ 31, 2023
26 °C

ರಾಗಿಣಿ ಈ ರೀತಿ ಎಂದು ಗೊತ್ತಿರಲಿಲ್ಲ: ಸಚಿವ ನಾರಾಯಣ ಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ‘ಚಿತ್ರರಂಗಕ್ಕೂ ನನಗೂ ಸಂಪರ್ಕ‌ ಇಲ್ಲ. ಉಪ ಚುನಾವಣೆ ಸಂದರ್ಭದಲ್ಲಿ ರಾಗಿಣಿ ಅವರನ್ನು ಪ್ರಚಾರಕ್ಕೆ ನಾನು ಕರೆಸಿರಲಿಲ್ಲ. ಹಿತೈಷಿಗಳು ಕರೆಸಿದ್ದರು. ಪ್ರಚಾರಕ್ಕೆ ಬರುವಾಗ ಬೇಡ ಎಂದು ಹೇಳಲು ಆಗುವುದಿಲ್ಲ’ ಎಂದು ಪೌರಾಡಳಿತ, ತೋಟಗಾರಿಕೆ ಹಾಗೂ ರೇಷ್ಮೆ ಸಚಿವ ನಾರಾಯಣ ಗೌಡ ಅವರು ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಗಿಣಿ ಪರವಾಗಿ ಪಕ್ಷದಲ್ಲಿ ಯಾರೂ ಇಲ್ಲ. ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ರಾಗಿಣಿ ಈ ರೀತಿ ಎಂದು ಗೊತ್ತಿರಲಿಲ್ಲ. ಚುನಾವಣಾ ಸಂದರ್ಭದಲ್ಲಿ ಪ್ರಚಾರಕ್ಕೆ‌ ಬಂದರೆ ನಾವು ಏನು‌ ಮಾಡುವುಕ್ಕೆ ಆಗುತ್ತದೆ’ ಎಂದು ಅವರು ಕೇಳಿದರು.

ಇದನ್ನೂ ಓದಿ: ರಾಗಿಣಿ ಬಿಜೆಪಿಯವರೋ ಅಲ್ಲವೋ? ಬಿಜೆಪಿ–ಕಾಂಗ್ರೆಸ್‌ ನಡುವೆ ಕುತೂಹಲದ ಚರ್ಚೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು