ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಗಿಣಿ ಈ ರೀತಿ ಎಂದು ಗೊತ್ತಿರಲಿಲ್ಲ: ಸಚಿವ ನಾರಾಯಣ ಗೌಡ

Last Updated 7 ಸೆಪ್ಟೆಂಬರ್ 2020, 6:12 IST
ಅಕ್ಷರ ಗಾತ್ರ

ಚಾಮರಾಜನಗರ:‘ಚಿತ್ರರಂಗಕ್ಕೂ ನನಗೂ ಸಂಪರ್ಕ‌ ಇಲ್ಲ. ಉಪ ಚುನಾವಣೆ ಸಂದರ್ಭದಲ್ಲಿ ರಾಗಿಣಿ ಅವರನ್ನು ಪ್ರಚಾರಕ್ಕೆ ನಾನು ಕರೆಸಿರಲಿಲ್ಲ. ಹಿತೈಷಿಗಳು ಕರೆಸಿದ್ದರು. ಪ್ರಚಾರಕ್ಕೆ ಬರುವಾಗ ಬೇಡ ಎಂದು ಹೇಳಲು ಆಗುವುದಿಲ್ಲ’ ಎಂದು ಪೌರಾಡಳಿತ, ತೋಟಗಾರಿಕೆ ಹಾಗೂ ರೇಷ್ಮೆ ಸಚಿವ ನಾರಾಯಣ ಗೌಡ ಅವರು ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಗಿಣಿ ಪರವಾಗಿ ಪಕ್ಷದಲ್ಲಿ ಯಾರೂ ಇಲ್ಲ. ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ರಾಗಿಣಿ ಈ ರೀತಿ ಎಂದು ಗೊತ್ತಿರಲಿಲ್ಲ. ಚುನಾವಣಾ ಸಂದರ್ಭದಲ್ಲಿ ಪ್ರಚಾರಕ್ಕೆ‌ ಬಂದರೆ ನಾವು ಏನು‌ ಮಾಡುವುಕ್ಕೆ ಆಗುತ್ತದೆ’ಎಂದು ಅವರು ಕೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT