ರಮೇಶ್ ಸಾವಿನ ಬಗ್ಗೆ ತಮ್ಮ ಫೇಸ್ಬುಕ್ನಲ್ಲಿ ಬರೆದುಕೊಂಡಿರುವ ಸುರೇಶ್ಕುಮಾರ್, ‘ನಮ್ಮ ಕ್ಷೇತ್ರದ (ರಾಜಾಜಿನಗರ) ಅನೇಕರನ್ನು ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಉಳಿಸಿದ್ದ, ರಮೇಶ್ ಇನ್ನಿಲ್ಲ. ಸುಮಾರು ಎಂಟು ವರ್ಷಗಳಿಂದ ನನ್ನೊಡನಿದ್ದು, ಜನಪರ ಕಾಳಜಿಯಿಂದ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು’ ಎಂದಿದ್ದಾರೆ.