<p><strong>ರಾಯಚೂರು:</strong> ರಾಜ್ಯ ಸಚಿವ ಸಂಪುಟದಲ್ಲಿ ದಲ್ಲಾಳಿ, ಭ್ರಷ್ಟಾಚಾರಿಗಳಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ ಅವರು ವಾಗ್ದಾಳಿ ಮುಂದುವರಿಸಿದ್ದಾರೆ.</p>.<p>ಜಿಲ್ಲೆಯ ತಿಂಥಣಿ ಬ್ರಿಡ್ಜ್ ಕನಕಗುರು ಪೀಠದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುವ ಪೂರ್ವ ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಸಚಿವ ಸಂಪುಟ ವಿಸ್ತರಣೆ ಆಗುವಾಗ ಒತ್ತಡ ಇರುವುದು ಸಹಜ. ಆದರೆ ಭ್ರಷ್ಟರನ್ನು ಸಚಿವ ಮಾಡುವ ಒತ್ತಾಯ ಸಾಮಾನ್ಯವಾಗಿ ಮುಖ್ಯಮಂತ್ರಿಗೆ ಇರುವುದಿಲ್ಲ. ಸಿ.ಪಿ.ಯೋಗೇಶ್ವರ್ ಭ್ರಷ್ಟಾಚಾರ ಹೊದ್ದು ಮಲಗಿದ್ದಾನೆ. ಜನರಿಗೆ ಮೋಸ ಮಾಡಿದವನಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಹರಿಹಾಯ್ದರು.</p>.<p>ಸಮ್ಮಿಶ್ರ ಸರ್ಕಾರದಲ್ಲಿ ಕ್ಷೀಪ್ರಕ್ರಾಂತಿ ಮಾಡಿ 17 ಜನರು ಹೊರಬಂದಿದ್ದೇವೆ. ಒಳ್ಳೆಯದಾಗುತ್ತದೆ ಎಂದು ನಿರೀಕ್ಷೆ ಇತ್ತು. ಈಗಿನ ಬೆಳವಣಿಗೆ ನಿರಾಸೆ ಮೂಡಿಸಿದೆ ಎಂದರು.</p>.<p>ಬಿಜೆಪಿಯಲ್ಲಿ ಸನ್ ಸ್ಟ್ರೋಕ್ (ಮಕ್ಕಳ ಒತ್ತಡ) ಆಗಿದೆ. ಶೀಘ್ರದಲ್ಲಿ ಸಿ.ಡಿ.ವೊಂದು ಬಿಡುಗಡೆ ಆಗಲಿದೆ. ಅದನ್ನು ಯಾರೂ ಬಿಡುಗಡೆ ಮಾಡುತ್ತಾರೆ ಎಂಬುದು ಮುಂದೆ ತಿಳಿಯಲಿದೆ ಎಂದು ಗುಟ್ಟು ಬಿಟ್ಟು ಕೊಡಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ರಾಜ್ಯ ಸಚಿವ ಸಂಪುಟದಲ್ಲಿ ದಲ್ಲಾಳಿ, ಭ್ರಷ್ಟಾಚಾರಿಗಳಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ ಅವರು ವಾಗ್ದಾಳಿ ಮುಂದುವರಿಸಿದ್ದಾರೆ.</p>.<p>ಜಿಲ್ಲೆಯ ತಿಂಥಣಿ ಬ್ರಿಡ್ಜ್ ಕನಕಗುರು ಪೀಠದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುವ ಪೂರ್ವ ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಸಚಿವ ಸಂಪುಟ ವಿಸ್ತರಣೆ ಆಗುವಾಗ ಒತ್ತಡ ಇರುವುದು ಸಹಜ. ಆದರೆ ಭ್ರಷ್ಟರನ್ನು ಸಚಿವ ಮಾಡುವ ಒತ್ತಾಯ ಸಾಮಾನ್ಯವಾಗಿ ಮುಖ್ಯಮಂತ್ರಿಗೆ ಇರುವುದಿಲ್ಲ. ಸಿ.ಪಿ.ಯೋಗೇಶ್ವರ್ ಭ್ರಷ್ಟಾಚಾರ ಹೊದ್ದು ಮಲಗಿದ್ದಾನೆ. ಜನರಿಗೆ ಮೋಸ ಮಾಡಿದವನಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಹರಿಹಾಯ್ದರು.</p>.<p>ಸಮ್ಮಿಶ್ರ ಸರ್ಕಾರದಲ್ಲಿ ಕ್ಷೀಪ್ರಕ್ರಾಂತಿ ಮಾಡಿ 17 ಜನರು ಹೊರಬಂದಿದ್ದೇವೆ. ಒಳ್ಳೆಯದಾಗುತ್ತದೆ ಎಂದು ನಿರೀಕ್ಷೆ ಇತ್ತು. ಈಗಿನ ಬೆಳವಣಿಗೆ ನಿರಾಸೆ ಮೂಡಿಸಿದೆ ಎಂದರು.</p>.<p>ಬಿಜೆಪಿಯಲ್ಲಿ ಸನ್ ಸ್ಟ್ರೋಕ್ (ಮಕ್ಕಳ ಒತ್ತಡ) ಆಗಿದೆ. ಶೀಘ್ರದಲ್ಲಿ ಸಿ.ಡಿ.ವೊಂದು ಬಿಡುಗಡೆ ಆಗಲಿದೆ. ಅದನ್ನು ಯಾರೂ ಬಿಡುಗಡೆ ಮಾಡುತ್ತಾರೆ ಎಂಬುದು ಮುಂದೆ ತಿಳಿಯಲಿದೆ ಎಂದು ಗುಟ್ಟು ಬಿಟ್ಟು ಕೊಡಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>