ಬೆಂಗಳೂರು: ‘ತೌಕ್ತೆ’ ಚಂಡಮಾರುತ ಎದುರಿಸಲು ಸರ್ಕಾರ ಸನ್ನದ್ಧವಾಗಿದ್ದು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಎಂಟು ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ. ಈ ಶಿಬಿರಗಳಲ್ಲಿ 10 ಸಾವಿರ ಜನರು ಉಳಿದುಕೊಳ್ಳಬಹುದು’ ಎಂದು ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷರೂ ಆಗಿರುವ ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.