ಬೆಂಗಳೂರು: ಕರೆ ಮಾಡಿ ಅಕ್ಕಿ ಕಡಿತದ ಬಗ್ಗೆ ಪ್ರಶ್ನಿಸಿದ ರೈತನಿಗೆ ಸಚಿವ ಉಮೇಶ್ ಕತ್ತಿ, ಸಾಯಿ ಎಂದು ನಿಂದಿಸಿದ್ದ ವಿಚಾರಕ್ಕೆ ಸಂಬಂದಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊರೋನಾ ಸಂಕಷ್ಟದಲ್ಲಿ ಹಸಿವಿನಿಂದ ಬಳಲುವ ಜನರ ನೆರವಿಗೆ ಬರಬೇಕಾದ ಆಹಾರ ಸಚಿವರೇ ದರ್ಪದ ಉತ್ತರ ನೀಡಿ ಮಾನಸಿಕ ವಿಕೃತಿ ಮೆರೆದಿದ್ದಾರೆ.
ಕೊರೋನಾ ಸಂಕಷ್ಟದಲ್ಲಿ ಹಸಿವಿನಿಂದ ಬಳಲುವ ಜನರ ನೆರವಿಗೆ ಬರಬೇಕಾದ ಆಹಾರ ಸಚಿವರೇ ದರ್ಪದ ಉತ್ತರ ನೀಡಿ ಮಾನಸಿಕ ವಿಕೃತಿ ಮೆರೆದಿದ್ದಾರೆ. ರಾಜ್ಯ ಸರ್ಕಾರ ಪಡಿತರ ಅಕ್ಕಿ ಕಡಿತಗೊಳಿಸಿದನ್ನು ಸಚಿವರಿಗೆ ಕರೆ ಮಾಡಿ ಪ್ರಶ್ನಿಸಿದ ವ್ಯಕ್ತಿಯೊಬ್ಬರಿಗೆ ಸಾಯೋದು ಒಳ್ಳೆಯದು ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿರುವುದು ಅತ್ಯಂತ ಅಮಾನವೀಯ. 1/2
ರಾಜ್ಯ ಸರ್ಕಾರ ಪಡಿತರ ಅಕ್ಕಿ ಕಡಿತಗೊಳಿಸಿದನ್ನು ಸಚಿವರಿಗೆ ಕರೆ ಮಾಡಿ ಪ್ರಶ್ನಿಸಿದ ವ್ಯಕ್ತಿಯೊಬ್ಬರಿಗೆ ಸಾಯೋದು ಒಳ್ಳೆಯದು ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿರುವುದು ಅತ್ಯಂತ ಅಮಾನವೀಯ.
ಇದನ್ನು ತೀವ್ರವಾಗಿ ಖಂಡಿಸುವೆ. ಜನಸಾಮಾನ್ಯರ ಬಗ್ಗೆ ಕನಿಷ್ಠ ಕಾಳಜಿ ಇಲ್ಲದ ಇಂತಹ ಸಚಿವರನ್ನು ಸಂಪುಟದಿಂದ ಕಿತ್ತೊಗೆಯುವಂತೆ ಮುಖ್ಯಮಂತ್ರಿಗಳಿಗೆ ಆಗ್ರಹಿಸುತ್ತೇನೆ. 2/2
ಇದನ್ನು ತೀವ್ರವಾಗಿ ಖಂಡಿಸುವೆ. ಜನಸಾಮಾನ್ಯರ ಬಗ್ಗೆ ಕನಿಷ್ಠ ಕಾಳಜಿ ಇಲ್ಲದ ಇಂತಹ ಸಚಿವರನ್ನು ಸಂಪುಟದಿಂದ ಕಿತ್ತೊಗೆಯುವಂತೆ ಮುಖ್ಯಮಂತ್ರಿಗಳಿಗೆ ಆಗ್ರಹಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.