<p><strong>ಮೋಳೆ:</strong> ಕಾಗವಾಡ ತಾಲ್ಲೂಕಿನ ಮೊಳವಾಡ ಗ್ರಾಮದಲ್ಲಿ ಸೋಮವಾರ ಸಂಜೆ ಪ್ರವಾಹ ಪರಿಸ್ಥಿತಿ ಪರಿಶೀಲನೆಗೆ ಬಂದಿದ್ದ ಜವಳಿ ಸಚಿವ ಶ್ರೀಮಂತ ಪಾಟೀಲ ಅವರನ್ನು ನೆರೆ ಸಂತ್ರಸ್ತರು ತರಾಟೆಗೆ ತೆಗೆದುಕೊಂಡರು.</p>.<p>‘ನಾವೆಲ್ಲರೂ ಸಂಕಷ್ಟಕ್ಕೆ ಒಳಗಾಗಿದ್ದರೂ ಒಂದು ವರ್ಷದಿಂದ ಇತ್ತ ಸುಳಿಯಲಿಲ್ಲ. ಪರಿಹಾರ ಸಿಕ್ಕಿದೆಯೇ ಇಲ್ಲವೇ ಎಂದು ತಿಳಿದುಕೊಳ್ಳುವ ಪ್ರಯತ್ನ ಮಾಡಿಲ್ಲ. ಕಾಟಾಚಾರಕ್ಕಾಗಿ ವೀಕ್ಷಣೆಗೆ ಬಂದಿದ್ದು ಏಕೆ’ ಎಂದು ಪ್ರಶ್ನಿಸಿದರು.</p>.<p>‘ಮನೆಗಳಿಗೆ ಸರಿಯಾದ ಪರಿಹಾರ ಸಿಕ್ಕಿಲ್ಲ. ಬೆಳೆ ಪರಿಹಾರವೂ ದೊರೆತಿಲ್ಲ. ಭರವಸೆ ಈಡೇರಿಸುವ ಕೆಲಸವನ್ನೂ ನೀವು ಮಾಡಿಲ್ಲ. ನಾವು ಸತ್ತ ಮೇಲೆ ಬರಬೇಕಿತ್ತು’ ಎಂದು ಆಕ್ರೋಶದಿಂದ ಕೇಳಿದರು.</p>.<p>‘ಸಂತ್ರಸ್ತರಿಗೆ ಎಲ್ಲ ಸೌಲಭ್ಯಗಳನ್ನೂ ಕಲ್ಪಿಸಲಾಗಿದೆ. ಸದ್ಯಕ್ಕೆ ಪ್ರವಾಹ ಪರಿಸ್ಥಿತಿ ಇಲ್ಲ. ಯಾರೋ ನಾಲ್ವರು ಕುಡಿದು ಬಂದು ಗಲಾಟೆ ಮಾಡಿದ್ದಾರೆ. ಜನರಿಗೆ ಏನೇ ಸಮಸ್ಯೆ ಇದ್ದರೂ ಪರಿಹರಿಸಲಾಗುವುದು’ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೋಳೆ:</strong> ಕಾಗವಾಡ ತಾಲ್ಲೂಕಿನ ಮೊಳವಾಡ ಗ್ರಾಮದಲ್ಲಿ ಸೋಮವಾರ ಸಂಜೆ ಪ್ರವಾಹ ಪರಿಸ್ಥಿತಿ ಪರಿಶೀಲನೆಗೆ ಬಂದಿದ್ದ ಜವಳಿ ಸಚಿವ ಶ್ರೀಮಂತ ಪಾಟೀಲ ಅವರನ್ನು ನೆರೆ ಸಂತ್ರಸ್ತರು ತರಾಟೆಗೆ ತೆಗೆದುಕೊಂಡರು.</p>.<p>‘ನಾವೆಲ್ಲರೂ ಸಂಕಷ್ಟಕ್ಕೆ ಒಳಗಾಗಿದ್ದರೂ ಒಂದು ವರ್ಷದಿಂದ ಇತ್ತ ಸುಳಿಯಲಿಲ್ಲ. ಪರಿಹಾರ ಸಿಕ್ಕಿದೆಯೇ ಇಲ್ಲವೇ ಎಂದು ತಿಳಿದುಕೊಳ್ಳುವ ಪ್ರಯತ್ನ ಮಾಡಿಲ್ಲ. ಕಾಟಾಚಾರಕ್ಕಾಗಿ ವೀಕ್ಷಣೆಗೆ ಬಂದಿದ್ದು ಏಕೆ’ ಎಂದು ಪ್ರಶ್ನಿಸಿದರು.</p>.<p>‘ಮನೆಗಳಿಗೆ ಸರಿಯಾದ ಪರಿಹಾರ ಸಿಕ್ಕಿಲ್ಲ. ಬೆಳೆ ಪರಿಹಾರವೂ ದೊರೆತಿಲ್ಲ. ಭರವಸೆ ಈಡೇರಿಸುವ ಕೆಲಸವನ್ನೂ ನೀವು ಮಾಡಿಲ್ಲ. ನಾವು ಸತ್ತ ಮೇಲೆ ಬರಬೇಕಿತ್ತು’ ಎಂದು ಆಕ್ರೋಶದಿಂದ ಕೇಳಿದರು.</p>.<p>‘ಸಂತ್ರಸ್ತರಿಗೆ ಎಲ್ಲ ಸೌಲಭ್ಯಗಳನ್ನೂ ಕಲ್ಪಿಸಲಾಗಿದೆ. ಸದ್ಯಕ್ಕೆ ಪ್ರವಾಹ ಪರಿಸ್ಥಿತಿ ಇಲ್ಲ. ಯಾರೋ ನಾಲ್ವರು ಕುಡಿದು ಬಂದು ಗಲಾಟೆ ಮಾಡಿದ್ದಾರೆ. ಜನರಿಗೆ ಏನೇ ಸಮಸ್ಯೆ ಇದ್ದರೂ ಪರಿಹರಿಸಲಾಗುವುದು’ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>