ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೆಡ್ಡಿ ಪಕ್ಷದ ಕಾರ್ಯಕ್ರಮಕ್ಕೆ ಜನರನ್ನು ಆಹ್ವಾನಿಸಿ ಟ್ವೀಟ್ ಮಾಡಿದರೇ ರಾಮುಲು?

Last Updated 17 ಜನವರಿ 2023, 14:28 IST
ಅಕ್ಷರ ಗಾತ್ರ

ಬೆಂಗಳೂರು: ಗಣಿ ಉದ್ಯಮಿ, ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ಕ್ಕೆ ಕಾರ್ಯಕರ್ತರು ಸೇರ್ಪಡೆಯಾಗುವ ಸಮಾರಂಭಕ್ಕೆ ಆಗಮಿಸುವಂತೆ ಜನರಿಗೆ ಆಹ್ವಾನ ನೀಡಿ ಶ್ರೀರಾಮುಲು ಅವರು ಮಾಡಿದ್ದ ಟ್ವೀಟ್‌ನ ಸ್ಕ್ರೀನ್‌ಶಾಟ್‌ ಅನ್ನು ಕಾಂಗ್ರೆಸ್‌ ಮಂಗಳವಾರ ಹಂಚಿಕೊಂಡಿದೆ.

‘ಜನಾರ್ಧನ ರೆಡ್ಡಿಯವರ ಪಕ್ಷಕ್ಕೆ ಕಾರ್ಯಕರ್ತರನ್ನು ಆಹ್ವಾನಿಸುವ ಟ್ವೀಟ್ ಮಾಡಿ ಡಿಲೀಟ್ ಮಾಡಿದ ಶ್ರೀರಾಮುಲು ಅವರೇ, ತಮ್ಮ ಆಪ್ತರ ಮೇಲಿನ ಐಟಿ ದಾಳಿಗೂ, ಈ ಟ್ವೀಟ್‌ಗೂ ಸಂಬಂಧವಿರುವಂತಿದೆ ಅಲ್ಲವೇ? ಡಿಲೀಟ್ ಮಾಡಿದ್ದೇಕೆ? ದೆಹಲಿಯಿಂದ ನಿಮ್ಮ ಮೇಲೂ ಐಟಿ ದಾಳಿ ಮಾಡುವ ಬೆದರಿಕೆ ಬಂತೇ? ರಾಮುಲು ಪಕ್ಷ ಬಿಡುವರೇ? ಎಂದು ಕಾಂಗ್ರೆಸ್‌ ಗೇಲಿ ಮಾಡಿದೆ.

‘ಜನವರಿ 17ನೇ 2023ರಂದು ಗಾಲಿ ಜನಾರ್ದನ ರೆಡ್ಡಿಯವರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮಕ್ಕೆ ಸಿಂಧನೂರಿನ ಮಹಾ ಜನತೆಯನ್ನು ಹೃದಯ ಪೂರ್ಕವಾಗಿ ಆಹ್ವಾನಿಸುತ್ತೇನೆ’ ಎಂದು ಕಾಂಗ್ರೆಸ್‌ ಹಂಚಿಕೊಂಡಿರುವ ಟ್ವೀಟ್‌ ಸ್ಕ್ರೀನ್‌ ಶಾಟ್‌ನಲ್ಲಿ ಉಲ್ಲೇಖಿಸಲಾಗಿದೆ. ಈ ಟ್ವೀಟ್‌ ಅನ್ನು ನಂತರ ಡಿಲೀಟ್‌ ಮಾಡಲಾಗಿದೆ ಎಂದು ಕಾಂಗ್ರೆಸ್‌ ಹೇಳಿದೆ.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT