<p><strong>ಬೆಂಗಳೂರು:</strong> ‘ರಾಜಕೀಯ ಷಡ್ಯಂತ್ರ ಆರಂಭವಾಗಿದೆ. ಹೇಗಾದರೂ ಮಾಡಿ ತೇಜೋವಧೆ ಮಾಡಲು ಯತ್ನ ನಡೆಯುತ್ತಿದೆ’ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು.</p>.<p>ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ಕೋರ್ಟ್ ಮೊರೆ ಹೋಗಿರುವ ಬಗ್ಗೆ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಶನಿವಾರ ಸುದ್ದಿಗಾರ ಜೊತೆ ಮಾತನಾಡಿದ ಅವರು, ‘ಅನೇಕ ವರ್ಷಗಳ ಹೆಸರು, ಜನಪ್ರಿಯತೆಯನ್ನು ತೇಜೋವಧೆ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಬಲವಾದ ಕಾನೂನುಗಳನ್ನು ತರಬೇಕು. ಮುಖ್ಯಮಂತ್ರಿ ಹಾಗೂ ಕಾನೂನು ಸಚಿವರ ಜೊತೆ ಈ ಬಗ್ಗೆ ಚರ್ಚೆ ನಡಸಲಾಗಿದೆ’ ಎಂದರು.</p>.<p>ಎಲ್ಲಾ ಕ್ಷೇತ್ರಗಳಲ್ಲಿ ಇಂಥ ಯತ್ನಗಳು ನಡೆಯುತ್ತಿವೆ. ಅದರಲ್ಲೂ ರಾಜಕೀಯ ಕ್ಷೇತ್ರದಲ್ಲಿ ಹೆಚ್ಚಾಗಿದೆ. ನೈಜತೆ ಇದ್ದರೆ ಯಾವುದನ್ನೂ ನಿಷೇಧಿಸಲು ಸಾಧ್ಯವಿಲ್ಲ. ನಾನೂ ಸೇರಿದಂತೆ ಯಾರದೇ ಆಗಿರಲಿ, ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ. ಜನರ ಮುಂದೆ ಖಳನಾಯಕರನ್ನಾಗಿ ಮಾಡುವ ಷಡ್ಯಂತ್ರವಿದು ಎಂದು ಟೀಕಿಸಿದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/six-ministers-who-went-to-court-against-defamatory-news-publication-810888.html" target="_blank">ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ನ್ಯಾಯಾಲಯದ ಮೊರೆ ಹೋದ ಆರು ಸಚಿವರು</a></strong></p>.<p>ರಷ್ಯಾ, ದುಬೈನಿಂದ ವಿಡಿಯೋ ಅಪ್ ಲೋಡ್ ಮಾಡಲಾಗುತ್ತಿದೆ. ನಾವು ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ. ನಾವಷ್ಟೇ ಅಲ್ಲ, ಇಂದು ಐದಾರು ಜನ ನ್ಯಾಯಾಲಯಕ್ಕೆ ಹೋಗುತ್ತಾರೆ. ಮಾಧ್ಯಮಗಳ ಮೂಲಕ ತೇಜೋವಧೆ ಮಾಡಿಸುತ್ತಿದ್ದಾರೆ. ಯಾವುದೇ ವಿಚಾರ ಬಂದಾಗ ಪರಾಮರ್ಶಿಸಿ 24 ಗಂಟೆನೂ ಹಾಕಿ. ಸತ್ಯವಂತರಿಗೆ ಭಯ ಇಲ್ಲ. ಆದರೆ, ಹಿಟ್ ಅಂಡ್ ರನ್ ಮಾಡುವ ಜನರಿಗೆ ಭಯ ಬೀಳಬೇಕಾಗಿದೆ ಎಂದರು.</p>.<p>ರಮೇಶ್ ಜಾರಕಿಹೋಳಿ ಪ್ರಕರಣದಲ್ಲಿ ಮೊದಲ ದಿನ ಸಂತ್ರಸ್ತೆ ಎಂದು ಹೇಳಿದ್ದಾರೆ. ಆದರೆ, ಅವಳು ಇಲ್ಲಿಯವರೆಗೆ ಯಾಕೆ ಮುಂದೆ ಬಂದಿಲ್ಲ. ಆಕೆಯ ಕುಟುಂಬ ಕೂಡ ಮುಂದೆ ಬಂದಿಲ್ಲ. ಅವಳು ಯಾರು ಏನೂ ಎಂಬುದು ಗೊತ್ತಿಲ್ಲ. ಯಾಕೆ ಗುರಿ ಮಾಡ್ತಾ ಇದ್ದಾರೆ ಅನ್ನೋದು ಗೊತ್ತಿಲ್ಲ.ನಾವು ಯಾವುದೇ ತಪ್ಪು ಮಾಡಿಲ್ಲ. ತಪ್ಪು ನಾವು ಮಾಡುವುದೂ ಇಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಾಜಕೀಯ ಷಡ್ಯಂತ್ರ ಆರಂಭವಾಗಿದೆ. ಹೇಗಾದರೂ ಮಾಡಿ ತೇಜೋವಧೆ ಮಾಡಲು ಯತ್ನ ನಡೆಯುತ್ತಿದೆ’ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು.</p>.<p>ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ಕೋರ್ಟ್ ಮೊರೆ ಹೋಗಿರುವ ಬಗ್ಗೆ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಶನಿವಾರ ಸುದ್ದಿಗಾರ ಜೊತೆ ಮಾತನಾಡಿದ ಅವರು, ‘ಅನೇಕ ವರ್ಷಗಳ ಹೆಸರು, ಜನಪ್ರಿಯತೆಯನ್ನು ತೇಜೋವಧೆ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಬಲವಾದ ಕಾನೂನುಗಳನ್ನು ತರಬೇಕು. ಮುಖ್ಯಮಂತ್ರಿ ಹಾಗೂ ಕಾನೂನು ಸಚಿವರ ಜೊತೆ ಈ ಬಗ್ಗೆ ಚರ್ಚೆ ನಡಸಲಾಗಿದೆ’ ಎಂದರು.</p>.<p>ಎಲ್ಲಾ ಕ್ಷೇತ್ರಗಳಲ್ಲಿ ಇಂಥ ಯತ್ನಗಳು ನಡೆಯುತ್ತಿವೆ. ಅದರಲ್ಲೂ ರಾಜಕೀಯ ಕ್ಷೇತ್ರದಲ್ಲಿ ಹೆಚ್ಚಾಗಿದೆ. ನೈಜತೆ ಇದ್ದರೆ ಯಾವುದನ್ನೂ ನಿಷೇಧಿಸಲು ಸಾಧ್ಯವಿಲ್ಲ. ನಾನೂ ಸೇರಿದಂತೆ ಯಾರದೇ ಆಗಿರಲಿ, ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ. ಜನರ ಮುಂದೆ ಖಳನಾಯಕರನ್ನಾಗಿ ಮಾಡುವ ಷಡ್ಯಂತ್ರವಿದು ಎಂದು ಟೀಕಿಸಿದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/six-ministers-who-went-to-court-against-defamatory-news-publication-810888.html" target="_blank">ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ನ್ಯಾಯಾಲಯದ ಮೊರೆ ಹೋದ ಆರು ಸಚಿವರು</a></strong></p>.<p>ರಷ್ಯಾ, ದುಬೈನಿಂದ ವಿಡಿಯೋ ಅಪ್ ಲೋಡ್ ಮಾಡಲಾಗುತ್ತಿದೆ. ನಾವು ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ. ನಾವಷ್ಟೇ ಅಲ್ಲ, ಇಂದು ಐದಾರು ಜನ ನ್ಯಾಯಾಲಯಕ್ಕೆ ಹೋಗುತ್ತಾರೆ. ಮಾಧ್ಯಮಗಳ ಮೂಲಕ ತೇಜೋವಧೆ ಮಾಡಿಸುತ್ತಿದ್ದಾರೆ. ಯಾವುದೇ ವಿಚಾರ ಬಂದಾಗ ಪರಾಮರ್ಶಿಸಿ 24 ಗಂಟೆನೂ ಹಾಕಿ. ಸತ್ಯವಂತರಿಗೆ ಭಯ ಇಲ್ಲ. ಆದರೆ, ಹಿಟ್ ಅಂಡ್ ರನ್ ಮಾಡುವ ಜನರಿಗೆ ಭಯ ಬೀಳಬೇಕಾಗಿದೆ ಎಂದರು.</p>.<p>ರಮೇಶ್ ಜಾರಕಿಹೋಳಿ ಪ್ರಕರಣದಲ್ಲಿ ಮೊದಲ ದಿನ ಸಂತ್ರಸ್ತೆ ಎಂದು ಹೇಳಿದ್ದಾರೆ. ಆದರೆ, ಅವಳು ಇಲ್ಲಿಯವರೆಗೆ ಯಾಕೆ ಮುಂದೆ ಬಂದಿಲ್ಲ. ಆಕೆಯ ಕುಟುಂಬ ಕೂಡ ಮುಂದೆ ಬಂದಿಲ್ಲ. ಅವಳು ಯಾರು ಏನೂ ಎಂಬುದು ಗೊತ್ತಿಲ್ಲ. ಯಾಕೆ ಗುರಿ ಮಾಡ್ತಾ ಇದ್ದಾರೆ ಅನ್ನೋದು ಗೊತ್ತಿಲ್ಲ.ನಾವು ಯಾವುದೇ ತಪ್ಪು ಮಾಡಿಲ್ಲ. ತಪ್ಪು ನಾವು ಮಾಡುವುದೂ ಇಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>