‘ಬಿಜೆಪಿ ಸರ್ಕಾರ ಕೊರೊನಾ ಹೆಸರಿನಲ್ಲಿ ಸಾವಿರಾರು ಕೋಟಿ ಹಣವನ್ನು ಲೂಟಿ ಮಾಡಿದೆ. ಕೊರೊನಾದಿಂದ ಜನಸಾಮಾನ್ಯರು ಕಷ್ಟ ಅನುಭವಿಸುತ್ತಿದ್ದು, ಹಲವಾರು ಕೈಗಾರಿಕೆಗಳು ಮುಚ್ಚಿ ಹೋಗಿವೆ. ಕಾರ್ಮಿಕರು ಬೀದಿ ಪಾಲಾಗುತ್ತಿದ್ದರೂ ಅವರ ನೆರವಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಂದಿಲ್ಲ’ ಎಂದರು. ಕಾಂಗ್ರೆಸ್ ಬೆಂಗಳೂರು ಉತ್ತರ ಜಿಲ್ಲಾ ಘಟಕದ ಅಧ್ಯಕ್ಷ ಎಂ.ರಾಜ್ಕುಮಾರ್ ಅಧ್ಯಕ್ಷತೆ ವಹಿಸಿದ್ದರು.