<p><span class="tojvnm2t a6sixzi8 abs2jz4q a8s20v7p t1p8iaqh k5wvi7nf q3lfd5jv pk4s997a bipmatt0 cebpdrjk qowsmv63 owwhemhu dp1hu0rb dhp61c6y iyyx5f41"><strong>ಬೆಂಗಳೂರು:</strong> ಕೋವಿಡ್ ಎರಡನೇ ಅಲೆಯ ಈ ಸಂದರ್ಭದಲ್ಲಿ ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವದಂತಿ, ಸುಳ್ಳು ಸುದ್ದಿಗಳ ಹಾವಳಿ ಹೆಚ್ಚಾಗಿದೆ. ಗುರುವಾರವೂ ಇದೇ ರೀತಿ ವದಂತಿಯೊಂದು ಹರಡಿದ್ದು, ಹುಲಿಕಲ್ ನಟರಾಜ್ ಅವರು ಇನ್ನಿಲ್ಲ. ಭಾವಪೂರ್ಣ ಶ್ರದ್ಧಾಂಜಲಿ’ ಎನ್ನುವ ಅಡಿಬರಹವಿರುವ ಪೋಸ್ಟ್ಗಳು ವೈರಲ್ ಆಗಿದ್ದವು.<br /><br />ಈ ವದಂತಿಯಿಂದ ಸಾಕಷ್ಟು ಅಭಿಮಾನಿಗಳು, ಕುಟುಂಬಸ್ಥರನ್ನು ಆಘಾತಕ್ಕೊಳಗಾಗಿದ್ದರು. ಸೂಕ್ತ ಮಾಹಿತಿ ಅರಿಯದ ಹಲವರು ಹುಲಿಕಲ್ ನಟರಾಜ್ ಅವರ ಚಿತ್ರವನ್ನು ಹಾಕಿ ಶ್ರದ್ಧಾಂಜಲಿ ಅರ್ಪಿಸಿದ್ದರು. ಇದೀಗ ವದಂತಿಗಳ ಕುರಿತು ಹುಲಿಕಲ್ ನಟರಾಜ್ ಅವರೇ ಸ್ಪಷ್ಟನೆ ನೀಡಿದ್ದಾರೆ.<br /><br />‘ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಫೊಟೊ ಹಾಕಿ, ನಾನು ಮೃತಪಟ್ಟಿದ್ದೇನೆ ಎಂದು ಯಾರೋ ಕಿಡಿಗೇಡಿಗಳು ಸುಳ್ಳು ಸುದ್ದಿಯನ್ನು ಹಬ್ಬಿಸಿದ್ದಾರೆ. ಈ ಕುರಿತು ಹಲವಾರು ಮಂದಿ ನನಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ನಾನು ಮನೆಯಲ್ಲೇ ಇದ್ದೀನಿ, ಆರೋಗ್ಯವಾಗಿದ್ದೇನೆ. ಯಾರೂ ಭಯಪಡುವ ಅವಶ್ಯಕತೆ ಇಲ್ಲ. ಜನರ ಆಶೀರ್ವಾದ ಇರುವವರೆಗೂ ನನಗೆ ಏನೂ ಆಗುವುದಿಲ್ಲ’ ಎಂದು ವಿಡಿಯೊದಲ್ಲಿ ಉಲ್ಲೇಖಿಸಿದ್ದಾರೆ.</span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span class="tojvnm2t a6sixzi8 abs2jz4q a8s20v7p t1p8iaqh k5wvi7nf q3lfd5jv pk4s997a bipmatt0 cebpdrjk qowsmv63 owwhemhu dp1hu0rb dhp61c6y iyyx5f41"><strong>ಬೆಂಗಳೂರು:</strong> ಕೋವಿಡ್ ಎರಡನೇ ಅಲೆಯ ಈ ಸಂದರ್ಭದಲ್ಲಿ ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವದಂತಿ, ಸುಳ್ಳು ಸುದ್ದಿಗಳ ಹಾವಳಿ ಹೆಚ್ಚಾಗಿದೆ. ಗುರುವಾರವೂ ಇದೇ ರೀತಿ ವದಂತಿಯೊಂದು ಹರಡಿದ್ದು, ಹುಲಿಕಲ್ ನಟರಾಜ್ ಅವರು ಇನ್ನಿಲ್ಲ. ಭಾವಪೂರ್ಣ ಶ್ರದ್ಧಾಂಜಲಿ’ ಎನ್ನುವ ಅಡಿಬರಹವಿರುವ ಪೋಸ್ಟ್ಗಳು ವೈರಲ್ ಆಗಿದ್ದವು.<br /><br />ಈ ವದಂತಿಯಿಂದ ಸಾಕಷ್ಟು ಅಭಿಮಾನಿಗಳು, ಕುಟುಂಬಸ್ಥರನ್ನು ಆಘಾತಕ್ಕೊಳಗಾಗಿದ್ದರು. ಸೂಕ್ತ ಮಾಹಿತಿ ಅರಿಯದ ಹಲವರು ಹುಲಿಕಲ್ ನಟರಾಜ್ ಅವರ ಚಿತ್ರವನ್ನು ಹಾಕಿ ಶ್ರದ್ಧಾಂಜಲಿ ಅರ್ಪಿಸಿದ್ದರು. ಇದೀಗ ವದಂತಿಗಳ ಕುರಿತು ಹುಲಿಕಲ್ ನಟರಾಜ್ ಅವರೇ ಸ್ಪಷ್ಟನೆ ನೀಡಿದ್ದಾರೆ.<br /><br />‘ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಫೊಟೊ ಹಾಕಿ, ನಾನು ಮೃತಪಟ್ಟಿದ್ದೇನೆ ಎಂದು ಯಾರೋ ಕಿಡಿಗೇಡಿಗಳು ಸುಳ್ಳು ಸುದ್ದಿಯನ್ನು ಹಬ್ಬಿಸಿದ್ದಾರೆ. ಈ ಕುರಿತು ಹಲವಾರು ಮಂದಿ ನನಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ನಾನು ಮನೆಯಲ್ಲೇ ಇದ್ದೀನಿ, ಆರೋಗ್ಯವಾಗಿದ್ದೇನೆ. ಯಾರೂ ಭಯಪಡುವ ಅವಶ್ಯಕತೆ ಇಲ್ಲ. ಜನರ ಆಶೀರ್ವಾದ ಇರುವವರೆಗೂ ನನಗೆ ಏನೂ ಆಗುವುದಿಲ್ಲ’ ಎಂದು ವಿಡಿಯೊದಲ್ಲಿ ಉಲ್ಲೇಖಿಸಿದ್ದಾರೆ.</span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>