<p><strong>ಶಿವಮೊಗ್ಗ</strong>: ಏರ್ಗನ್ ಮೂಲಕ ಗುಂಡು ಹಾರಿಸಿ ಹೊಸ ವರ್ಷವನ್ನು ಸಂಭ್ರಮಿಸುವ ಧಾವಂತಕ್ಕೆ ನಗರದಲ್ಲಿ ಶನಿವಾರ ರಾತ್ರಿ ಜೀವವೊಂದು ಬಲಿಯಾಗಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.</p>.<p>ಇಲ್ಲಿನ ವಿದ್ಯಾನಗರದ 4ನೇ ಕ್ರಾಸ್ನಲ್ಲಿರುವ ಗೋಪಾಲ ಗ್ಲಾಸ್ಹೌಸ್ ಮಾಲೀಕ ಮಂಜುನಾಥ ಓಲೇಕಾರ ಅವರ ಮನೆಯ ಮಹಡಿಯ ಮೇಲೆ ಹೊಸ ವರ್ಷದ ಸ್ವಾಗತಕ್ಕೆ ಪಾರ್ಟಿ ಆಯೋಜಿಸಲಾಗಿತ್ತು.</p>.<p>ರಾತ್ರಿ 12 ಗಂಟೆ ಆಗುತ್ತಿದ್ದಂತೆಯೇ ಹೊಸ ವರ್ಷದ ಸಂಭ್ರಮ ಆಚರಿಸಲು ಮಂಜುನಾಥ್ ಓಲೇಕಾರ ಅವರು ಏರ್ಗನ್ನಿಂದ ಆಕಾಶದತ್ತ ಗುಂಡು ಹಾರಿಸಿದ್ದು, ಈ ವೇಳೆ ಅದು ಗುರಿ ತಪ್ಪಿ ವಿನಯ್ ಅವರಿಗೆ ತಗುಲಿದೆ. ಗಾಯಾಳುವನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಅಚಾತುರ್ಯದಿಂದ ಆದ ಈ ಘಟನೆಯಿಂದ ಘಾಸಿಗೊಂಡ ಮಂಜುನಾಥ ಓಲೇಕಾರ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ಕರೆದೊಯ್ಯುವ ಸಿದ್ಧತೆಯಲ್ಲಿದ್ದಾಗಲೇ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದ ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಸ್ಥಳಕ್ಕೆ ಕೋಟಿ ಠಾಣೆ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಏರ್ಗನ್ ಮೂಲಕ ಗುಂಡು ಹಾರಿಸಿ ಹೊಸ ವರ್ಷವನ್ನು ಸಂಭ್ರಮಿಸುವ ಧಾವಂತಕ್ಕೆ ನಗರದಲ್ಲಿ ಶನಿವಾರ ರಾತ್ರಿ ಜೀವವೊಂದು ಬಲಿಯಾಗಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.</p>.<p>ಇಲ್ಲಿನ ವಿದ್ಯಾನಗರದ 4ನೇ ಕ್ರಾಸ್ನಲ್ಲಿರುವ ಗೋಪಾಲ ಗ್ಲಾಸ್ಹೌಸ್ ಮಾಲೀಕ ಮಂಜುನಾಥ ಓಲೇಕಾರ ಅವರ ಮನೆಯ ಮಹಡಿಯ ಮೇಲೆ ಹೊಸ ವರ್ಷದ ಸ್ವಾಗತಕ್ಕೆ ಪಾರ್ಟಿ ಆಯೋಜಿಸಲಾಗಿತ್ತು.</p>.<p>ರಾತ್ರಿ 12 ಗಂಟೆ ಆಗುತ್ತಿದ್ದಂತೆಯೇ ಹೊಸ ವರ್ಷದ ಸಂಭ್ರಮ ಆಚರಿಸಲು ಮಂಜುನಾಥ್ ಓಲೇಕಾರ ಅವರು ಏರ್ಗನ್ನಿಂದ ಆಕಾಶದತ್ತ ಗುಂಡು ಹಾರಿಸಿದ್ದು, ಈ ವೇಳೆ ಅದು ಗುರಿ ತಪ್ಪಿ ವಿನಯ್ ಅವರಿಗೆ ತಗುಲಿದೆ. ಗಾಯಾಳುವನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಅಚಾತುರ್ಯದಿಂದ ಆದ ಈ ಘಟನೆಯಿಂದ ಘಾಸಿಗೊಂಡ ಮಂಜುನಾಥ ಓಲೇಕಾರ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ಕರೆದೊಯ್ಯುವ ಸಿದ್ಧತೆಯಲ್ಲಿದ್ದಾಗಲೇ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದ ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಸ್ಥಳಕ್ಕೆ ಕೋಟಿ ಠಾಣೆ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>