ಈ ಕುರಿತು ಪ್ರತಿಕ್ರಿಯಿಸಿದ ಇನ್ಸ್ಪೆಕ್ಟರ್ ಆನಂದ ಒಣಕುದರಿ, ‘ಪತ್ತೆಯಾದ ವಿದ್ಯಾರ್ಥಿಗಳು ರಾಯಚೂರಿನ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನಲ್ಲಿ ಪ್ರಥಮ, ಪಿಯುಸಿ ಓದುತ್ತಿದ್ದಾರೆ. ಶನಿವಾರ ಅವರು ನಾಪತ್ತೆಯಾಗಿದ್ದು, ಅಲ್ಲಿಯ ಮಹಿಳಾ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿತ್ತು. ಕುತೂಹಲಕ್ಕಾಗಿ ಸ್ನೇಹಿತರ ಜೊತೆಗೂಡಿ ಹುಬ್ಬಳ್ಳಿಗೆ ಬಂದಿರುವುದಾಗಿ ಅವರು ತಿಳಿಸಿದ್ದಾರೆ. ರಾಯಚೂರಿಗೆ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತಿದೆ’ ಎಂದು ತಿಳಿಸಿದರು.