ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಯಕತ್ವ ಬಿಕ್ಕಟ್ಟು ಮರೆಮಾಚಲು ಸದನದ ದುರುಪಯೋಗ: ಆರಗ ಜ್ಞಾನೇಂದ್ರ

Last Updated 17 ಫೆಬ್ರುವರಿ 2022, 12:56 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್‌ ಪಕ್ಷದೊಳಗಿನ ನಾಯಕತ್ವದ ಬಿಕ್ಕಟ್ಟನ್ನು ಮರೆ ಮಾಚಿ, ಹುಸಿ ಒಗ್ಗಟ್ಟು ಪ್ರದರ್ಶಿಸಲು ಕಾಂಗ್ರೆಸ್‌ ನಾಯಕರು ಸದನವನ್ನು ದುರುಪಯೋಗಿಸಿಕೊಂಡಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ದೂರಿದರು.

ಸುದ್ದಿಗಾರರ ಜತೆ ಗುರುವಾರ ಮಾತನಾಡಿದ ಅವರು, ಆ ಪಕ್ಷದ ಇಬ್ಬರು ನಾಯಕರು ಪಕ್ಷದ ಮೇಲಿನ ಹಿಡಿತ ಮತ್ತು ನಾಯಕತ್ವದ ಪಾರಮ್ಯ ಸಾಧಿಸಲು ಈಶ್ವರಪ್ಪ ಅವರ ಮಾತುಗಳನ್ನು ಬಳಸಿಕೊಂಡಿದ್ದಾರೆ ಎಂದು ಹೇಳಿದರು.

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ರಾಷ್ಟ್ರ ಧ್ವಜ ಹಾರಿಸಲು ಪ್ರಯತ್ನಿಸಿದ ನಾಗರಿಕರನ್ನು ಗುಂಡಿಟ್ಟು ಕೊಂದ ಇತಿಹಾಸ ಹೊಂದಿರುವ ಕಾಂಗ್ರೆಸ್‌ ನಾಯಕರು ಈಗ ಅದೇ ರಾಷ್ಟ್ರಧ್ವಜವನ್ನು ಮತ್ತು ಧ್ವಜ ಸಂಹಿತೆಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ರಾಷ್ಟ್ರಧ್ವಜವನ್ನು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಳಸುತ್ತಿರುವುದು ಆ ಪಕ್ಷದ ದುರ್ಬಲ ಸ್ಥಿತಿಯನ್ನು ಪ್ರತಿಫಲಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಸಚಿವ ಈಶ್ವರಪ್ಪ ಅವರಂತಹ ಅಪ್ಪಟ ದೇಶ ಪ್ರೇಮಿ ನಾಯಕರನ್ನು ಗುರಿಯಾಗಿಟ್ಟುಕೊಂಡು, ಕೆಸರೆರಚುವ ವ್ಯರ್ಥ ಪ್ರಯತ್ನ ಬಿಟ್ಟು ಕಾಂಗ್ರೆಸ್‌ ಶಾಸಕರು ಸುಗಮ ಕಲಾಪಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ರಾಜ್ಯದ ಜನರ ಕುಂದು ಕೊರತೆಗಳ ನಿವಾರಣೆಗೆ ಬೆಳಕು ಚೆಲ್ಲುವ ವೇದಿಕೆಯಾಗಬೇಕಿದ್ದ, ಸದನವನ್ನು ರಾಜಕೀಯ ಅಂಗಳವನ್ನಾಗಿ ಮಾಡಿಕೊಂಡಿರುವುದು ದುರಂತ. ಹಿಜಾಬ್‌ ವಿಷಯವನ್ನು ಕೆಲವು ಮತೀಯ ಸಂಘಟನೆಗಳು ಸಮಾಜ ಒಡೆಯುವ ಅಸ್ತ್ರವನ್ನಾಗಿ ಮಾಡಿಕೊಳ್ಳುವುದನ್ನು ಸಹಿಸುವುದಿಲ್ಲ. ಇದರ ಹಿಂದಿರುವ ಷಡ್ಯಂತ್ರವನ್ನು ಪೊಲೀಸರು ಬಯಲು ಮಾಡುತ್ತಾರೆ ಮತ್ತು ಅವರಿಗೆ ತಕ್ಕ ಕಾನೂನು ಕ್ರಮ ಆಗುತ್ತದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT