ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನದ ಅಂಗವಾಗಿ ಗುರುವಾರ ಮಂಗಳೂರು ನಗರ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಡಾ.ವೈ ಭರತ್ ಶೆಟ್ಟಿ ಪ್ಲಾಸ್ಮಾ ದಾನ ಮಾಡಿದರು.
ಈಚೆಗೆ ಕೋವಿಡ್– 19 ನಿಂದ ಗುಣಮುಖರಾಗಿರುವ ಅವರು, ಮಂಗಳೂರಿನ ದೇರಳಕಟ್ಟೆಯಲ್ಲಿರುವ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಪ್ಲಾಸ್ಮಾ ದಾನ ಮಾಡಿದರು. ಪ್ಲಾಸ್ಮಾ ದಾನಕ್ಕಾಗಿ ಅವರು ಬುಧವಾರ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದು, ವೈದ್ಯರ ಒಪ್ಪಿಗೆ ಪತ್ರ ಪಡೆದುಕೊಂಡಿದ್ದರು.
‘ಸೇವೆಯೇ ಸಂಘಟನೆ ಎನ್ನುವ ಪಕ್ಷದ ಧ್ಯೇಯದಲ್ಲಿ ಸೆ.14 ರಿಂದ 20ರ ತನಕ ‘ಸೇವಾ ಸಪ್ತಾಹ’ ಆಚರಿಸಲಾಗುತ್ತದೆ. ಕೋವಿಡ್–19 ನೆಗೆಟಿವ್ ಬಂದು ಗುಣಮುಖರಾಗಿರುವ ವ್ಯಕ್ತಿಗಳ ಪ್ಲಾಸ್ಮಾವನ್ನು ಕೋವಿಡ್ –19 ಸೋಂಕಿತರಿಗೆ ನೀಡುವುದರಿಂದ ಸೋಂಕಿತರು ಶೀಘ್ರ ಗುಣಮುಖರಾಗುತ್ತಾರೆ. ಈ ನಿಟ್ಟಿನಲ್ಲಿ ನಾನು ಮೋದಿ ಜನ್ಮದಿನದ ಅಂಗವಾಗಿ ಪ್ಲಾಸ್ಮಾ ದಾನ ಮಾಡಿದ್ದೇನೆ’ ಎಂದು ಅವರು ತಿಳಿಸಿದರು.