‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ‘ಶಾಸಕರೇ ನೇರವಾಗಿ ಮುಖ್ಯಮಂತ್ರಿ, ಸಚಿವರನ್ನು ಭೇಟಿಯಾದರೆ ಕೆಲಸ ಆಗುವುದಿಲ್ಲ. ಶಾಸಕರ ಲೆಟರ್ಹೆಡ್ ಹಿಡಿದು ಹೋಗುವ ವ್ಯಕ್ತಿಯ ಕೆಲಸ ಸುಲಭವಾಗಿ ಆಗುತ್ತಿದೆ. ಶಾಸಕಾಂಗ ಪಕ್ಷದಲ್ಲಿ ಮಾತನಾಡಲು ಬಿಡುತ್ತಿಲ್ಲ. ಕೈಕಟ್ಟಿ, ಬಾಯಿ ಮುಚ್ಚಿಕೊಳ್ಳಲು ಜನರು ನಮ್ಮನ್ನು ಆಯ್ಕೆ ಮಾಡಿಲ್ಲ. ನಾನು ಹೆಬ್ಬೆಟ್ಟು ಎಂಎಲ್ಎ ಅಲ್ಲ’ ಎಂದು ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದರು.