ಈ ಅರ್ಜಿಯು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್ ಅವರ ಮುಂದೆ ಮಂಗಳವಾರಕ್ಕೆ (ಮಾ.7) ನಿಗದಿಯಾಗಿದೆ. ‘ಎಫ್ಐಆರ್ ರದ್ದುಗೊಳಿಸಬೇಕು’ ಎಂದು ಕೋರಿ ವಿರೂಪಾಕ್ಷಪ್ಪ ಮತ್ತೊಂದು ಅರ್ಜಿ ದಾಖಲಿಸಿದ್ದು, ಇದು ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.