ರಾಜ್ಯ ಲೆಕ್ಕಪತ್ರ ಇಲಾಖೆಯ ಜಂಟಿ ನಿಯಂತ್ರಕರಾಗಿರುವ ಪ್ರಶಾಂತ್, ಬೆಂಗಳೂರು ಜಲ ಮಂಡಳಿಯಲ್ಲಿ ಮುಖ್ಯ ಲೆಕ್ಕಾಧಿಕಾರಿ ಹುದ್ದೆಯಲ್ಲಿದ್ದಾರೆ. ತಂದೆ ಅಧ್ಯಕ್ಷರಾಗಿರುವ ಕೆಎಸ್ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಿ, ರಾಸಾಯನಿಕ ಸರಬರಾಜು ವೇಳಾಪಟ್ಟಿ ಮತ್ತು ಕಾರ್ಯಾದೇಶ ವಿತರಿಸಲು ₹ 81 ಲಕ್ಷ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದರೂ ಗುತ್ತಿಗೆದಾರರಿಗೆ ಕಾರ್ಯಾದೇಶ ಮತ್ತು ಸರಬರಾಜು ವೇಳಾಪಟ್ಟಿ ನೀಡದಂತೆ ತಡೆಯೊಡ್ಡಿದ್ದರು. ಗುತ್ತಿಗೆದಾರ ಶ್ರೇಯಸ್ ಕಶ್ಯಪ್ ಲೋಕಾಯುಕ್ತ ಪೊಲೀಸ್ ವಿಭಾಗದ ಬೆಂಗಳೂರು ನಗರ ಘಟಕಕ್ಕೆ ದೂರು ನೀಡಿದ್ದರು.