ಈ ಕುರಿತ ಎಂಟು ಪ್ರತ್ಯೇಕ ಪ್ರಕರಣಗಳ ಮೇಲಿನ ಆದೇಶವನ್ನು ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ದ ನ್ಯಾಯಾಧೀಶೆ ಜೆ.ಪ್ರೀತ್ ಅವರು ಸೋಮವಾರ ಪ್ರಕಟಿಸಿದರು. ಕುಮಾರಸ್ವಾಮಿ ಅವರು ವಿವಿಧ ಪ್ರಕರಣಗಳಲ್ಲಿ ಒಟ್ಟು ₹ 1,38,65,000 ಮೊತ್ತಕ್ಕೆ ಮರುಪಾವತಿಯ ಚೆಕ್ ನೀಡಿದ್ದರು. ಇದರಲ್ಲಿ ₹ 1,36,50,000 ಬಾಕಿ ಉಳಿಸಿಕೊಂಡಿದ್ದರು. ಈ ಕುರಿತಂತೆ ಫಿರ್ಯಾದುಗಳು ಸಲ್ಲಿಕೆಯಾಗಿದ್ದವು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾ ಧೀಶರು ಈ ಆದೇಶ ನೀಡಿದ್ದಾರೆ.