ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯ ಮಂಡಿಸಿ ಮಾತನಾಡುವಾಗ ವಿಷಯ ಪ್ರಸ್ತಾಪಿಸಿದ ಜ್ಞಾನೇಂದ್ರ, ‘ಕಂದಾಯ ಇಲಾಖೆ ಹೊರಡಿಸಿರುವ ಸುತ್ತೋಲೆ ದುರ್ಬಳಕೆಯಾಗುವ ಸಾಧ್ಯತೆ ಇದೆ. ನಮೂನೆ 50, 53 ಮತ್ತು 57ರ ಅಡಿಯಲ್ಲಿ ಅರ್ಜಿ ಸಲ್ಲಿಸಿರುವ ಗ್ರಾಮೀಣ ಪ್ರದೇಶದ ರೈತರನ್ನು ಸಾಗುವಳಿ ಪ್ರದೇಶದಿಂದ ಒಕ್ಕಲೆಬ್ಬಿಸಲು ಈ ಸುತ್ತೋಲೆ ಕಾರಣವಾಗುವ ಅಪಾಯವಿದೆ. ಲಕ್ಷಗಟ್ಟಲೆ ಕುಟುಂಬಗಳಿಗೆ ತೊಂದರೆ ಆಗುತ್ತದೆ. ಸುತ್ತೋಲೆ ಕುರಿತು ಪುನರ್ ಪರಿಶೀಲನೆ ನಡೆಸಬೇಕು’ ಎಂದರು.