ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಯು ಉತ್ತರ ಪ್ರದೇಶ ವಿಧಾನ ಪರಿಷತ್ನ ಎರಡು ಮತ್ತು ಕರ್ನಾಟಕ ವಿಧಾನ ಪರಿಷತ್ನ ಒಂದು ಸ್ಥಾನಕ್ಕೆ ಅಭ್ಯರ್ಥಿಗಳನ್ನು ಘೋಷಿಸಿದೆ. ರಾಜ್ಯದಲ್ಲಿ ಬಾಬುರಾವ್ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಕಚೇರಿಯ ಉಸ್ತುವಾರಿಯೂ ಆಗಿರುವ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ತಿಳಿಸಿದ್ದಾರೆ.