ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ‌ಪದವೀಧರರ ಕ್ಷೇತ್ರ: ಇಪ್ಪತ್ತೆರಡೂವರೆ ತಾಸಾದರೂ ಮುಗಿಯದ ಮತ ಎಣಿಕೆ

Last Updated 16 ಜೂನ್ 2022, 1:18 IST
ಅಕ್ಷರ ಗಾತ್ರ

ಮೈಸೂರು: ಮೈಸೂರು, ಮಂಡ್ಯ, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಗಳನ್ನು ಒಳಗೊಂಡಿರುವ ವಿಧಾನಪರಿಷತ್ ದಕ್ಷಿಣ ‌ಪದವೀಧರರ ಕ್ಷೇತ್ರದ ಚುನಾವಣೆ ಮತ ಎಣಿಕೆ ಕಾರ್ಯ ಇಪ್ಪತ್ತೆರಡೂವರೆ ತಾಸಿನಿಂದಲೂ ನಡೆಯುತ್ತಿದೆ.

ಬುಧವಾರ ಬೆಳಿಗ್ಗೆ 8ಕ್ಕೆ ಸ್ಟ್ರಾಂಗ್ ರೂಂಗಳನ್ನು ತೆರೆದು ಮತಪೆಟ್ಟಿಗೆಗಳನ್ನು ತೆರೆಯಲಾಗಿತ್ತು. ಬಂಡಲ್ ಸಿದ್ಧಪಡಿಸುವ ಕಾರ್ಯ ಮಧ್ಯಾಹ್ನ 12ರವರೆಗೆ ನಡೆದಿತ್ತು. ಮಧ್ಯರಾತ್ರಿವರೆಗೂ ಪ್ರಥಮ ಪ್ರಾಶಸ್ತ್ಯದ ಮತಗಳ ಎಣಿಕೆಯೇ ನಡೆದಿತ್ತು. ಬಳಿಕ‌ ಎಲಿಮಿನೇಷನ್ ಪ್ರಕ್ರಿಯೆ ಆರಂಭವಾಗಿದ್ದು, ಇನ್ನೂ (ಬೆಳಿಗ್ಗೆ 6.38) ಪ್ರಗತಿಯಲ್ಲಿದೆ.

ಕಾಂಗ್ರೆಸ್ ಪಕ್ಷವು ಇದೇ‌ ಮೊದಲಿಗೆ ಗೆಲುವಿನತ್ತ ಮುಂದಡಿ ಇಟ್ಟಿದೆ.ಕಡಿಮೆ ಮತ ಪಡೆದ ಅಭ್ಯರ್ಥಿಗಳ ಎಲಿಮಿನೇಷನ್ ಪ್ರಕ್ರಿಯೆ ಮುಂದುವರಿದಿದ್ದು, ಈ ಹಂತದಲ್ಲೂ ಕಾಂಗ್ರೆಸ್‌ನ ಮಧು ಜಿ. ಮಾದೇಗೌಡ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿಯು 2ನೇ ಸ್ಥಾನದಲ್ಲಿದೆ. ಜೆಡಿಎಸ್ ನಂತರದ ಸ್ಥಾನದಲ್ಲಿದೆ.

ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಗೆಲುವಿಗೆ ನಿಗದಿಪಡಿದ್ದ ಕೋಟಾವನ್ನು ಯಾವೊಬ್ಬ ಅಭ್ಯರ್ಥಿಯೂ ತಲುಪಲಿಲ್ಲ. ಹೀಗಾಗಿ ಎಲಿಮಿನೇಷನ್ ಪ್ರಕ್ರಿಯೆ ನಡೆಯುತ್ತಿದೆ. ಕ್ರಮವಾಗಿ ಕಡಿಮೆ ಮತಗಳನ್ನು ಪಡೆದಿರುವವರನ್ನು ಎಲಿಮಿನೇಟ್ ಮಾಡಿ, ಅವರಿಗೆ ದೊರೆತ2ನೇ ಪ್ರಾಶಸ್ತ್ಯದ ಮತಗಳನ್ನು ಆಯಾ ಅಭ್ಯರ್ಥಿಗಳಿಗೆ ವರ್ಗಾಯಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT