ಮುಖ್ಯಮಂತ್ರಿಯವರ ಪರವಾಗಿ ಉತ್ತರ ನೀಡಿದ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ, ‘371ಜೆ ಅನುಷ್ಠಾನದ ಮೇಲುಸ್ತುವಾರಿಯನ್ನು ಸಚಿವ ಸಂಪುಟ ಉಪ ಸಮಿತಿ ನಿರ್ವಹಿಸುತ್ತಿದೆ. ಸ್ಥಳೀಯ ವೃಂದ ರಚನೆಯನ್ನೂ ಸಮಿತಿ ಕಾಲಕಾಲಕ್ಕೆ ಪರಿಶೀಲಿಸುತ್ತಿದೆ. ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು, ವೃಂದ ಮತ್ತು ನೇಮಕಾತಿ ನಿಯಮಗಳನ್ನು ರಚಿಸದಿರುವ ಕಾರಣ ಸ್ಥಳೀಯ ವೃಂದ ರಚನೆ ತಡವಾಗುತ್ತಿದೆ. ಸಮಸ್ಯೆ ಪರಿಹಾರಕ್ಕೆ ಮುಖ್ಯಮಂತ್ರಿಯವರ ಜತೆ ಸಮಾಲೋಚಿಸಿ ಉನ್ನತ ಮಟ್ಟದ ಸಭೆ ನಿಗದಿಪಡಿಸಲಾಗುವುದು’ ಎಂದು ಭರವಸೆ ನೀಡಿದರು.