ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜುಲೈನಲ್ಲೇ ಕೆಆರ್‌ಎಸ್‌ಗೆ ಬಾಗಿನ

Last Updated 8 ಜುಲೈ 2022, 12:18 IST
ಅಕ್ಷರ ಗಾತ್ರ

ಮಂಡ್ಯ: ‘ನಾಲ್ಕೈದು ದಿನದಲ್ಲಿ ಕೆಆರ್‌ಎಸ್‌ ಭರ್ತಿಯಾಗುವ ನಿರೀಕ್ಷೆ ಇದ್ದು ಜುಲೈ ತಿಂಗಳಲ್ಲೇ ಬಾಗಿನ ಅರ್ಪಿಸಲಾಗುವುದು. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಚರ್ಚಿಸಿ ದಿನಾಂಕ ನಿಗದಿ ಮಾಡಲಾಗುವುದು’ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಶುಕ್ರವಾರ ಹೇಳಿದರು.

ಶ್ರೀರಂಗಪಟ್ಟಣ ತಾಲ್ಲೂಕು ಕೆಆರ್‌ಎಸ್‌ ಜಲಾಶಯ ವೀಕ್ಷಣೆ ಮಾಡಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಸಾಮಾನ್ಯವಾಗಿ ಆಗಸ್ಟ್‌ ತಿಂಗಳ ನಂತರ ಜಲಾಶಯಗಳಿಗೆ ಬಾಗಿನ ಅರ್ಪಿಸಲಾಗುತ್ತಿತ್ತು. ಇದೇ ಮೊದಲ ಬಾರಿಗೆ ಜುಲೈ ತಿಂಗಳಲ್ಲೇ ಬಾಗಿನ ನೀಡಲಾಗುತ್ತಿದೆ. ನಿರಂತರ ಮಳೆಯಿಂದಾಗಿ ರಾಜ್ಯದ ವಿವಿಧಡೆ ಪ್ರವಾಹ ಭೀತಿ ಎದುರಾಗಿದೆ. ಪ್ರವಾಹ ಪರಿಸ್ಥಿತಿ ನಿಯಂತ್ರಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು’ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT