ನಿಗಮದ ಸಾಲ ಮರುಪಾವತಿಯನ್ನು ಸುಗಮಗೊಳಿಸಲು ಅಭಿವೃದ್ಧಿಪಡಿಸಿದ ಮೊಬೈಲ್ ಆ್ಯಪ್ಗೆ ಗುರುವಾರ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ, ‘ಹಣಕಾಸು ನಿಗಮ ಆಗಿ ಪರಿವರ್ತಿಸಿದರೆ ಹೆಚ್ಚಿನ ಸಂಪನ್ಮೂಲ ಕ್ರೋಡೀಕರಿಸಲು ಸಾಧ್ಯವಾಗಲಿದೆ. ಜೊತೆಗೆ, ಹೆಚ್ಚಿನ ಸಂಖ್ಯೆಯಲ್ಲಿ ಬಡ ಫಲಾನುಭವಿಗಳಿಗೆ ನೆರವು ನೀಡಲು ಅನುಕೂಲ ಆಗಲಿದೆ’ ಎಂದು ಅಭಿಪ್ರಾಯಪಟ್ಟರು.