ಜಿಲ್ಲಾ ಪಂಚಾಯಿತಿಯಲ್ಲಿ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಶಾಸಕರ ನಿಧಿ ಬಳಕೆಗೆ ಸಂಬಂಧಿಸಿದಂತೆ ಸಾಕಷ್ಟು ತಕರಾರುಗಳು ಬರುತ್ತಿವೆ. ನಿಗದಿತ ಆರ್ಥಿಕ ವರ್ಷದಲ್ಲಿ ಅನುದಾನ ಬಳಕೆ ಆಗದಿರುವ ಬಗ್ಗೆ ಅಸಮಾಧಾನವಿದೆ. ರಾಜ್ಯಕ್ಕೆ ಅನ್ವಯವಾಗುವ ರೀತಿಯಲ್ಲಿ ಮಾರ್ಗಸೂಚಿ ಬದಲಾವಣೆ ಮಾಡಲು ಚಿಂತನೆ ನಡೆಸಲಾಗಿದೆ’ ಎಂದು ಹೇಳಿದರು.