<p><strong>ಬೆಂಗಳೂರು</strong>: ಪ್ರಧಾನಿ ನರೇಂದ್ರ ಮೋದಿ ಐದು ರಾಜ್ಯಗಳ ಚುನಾವಣೆಯಲ್ಲಿ ಗೆಲ್ಲಲೇಬೇಕು ಎಂಬ ಹಟಕ್ಕೆ ಬಿದ್ದು, ಕೊರೊನಾ ನಿಯಂತ್ರಣ ಮರೆತರು. ಅದರಿಂದಾಗಿಯೇ ದೇಶದಲ್ಲಿ ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹಬ್ಬಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಆರೋಪಿಸಿದರು.</p>.<p>ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ‘ಕೋವಿಡ್ ಮೊದಲ ಅಲೆಯನ್ನು ಮೋದಿ ಸಮರ್ಥವಾಗಿ ನಿಯಂತ್ರಿಸಿದ್ದಾರೆ ಎಂದು ಎಲ್ಲರೂ ಹೊಗಳಿದ್ದರು. ಆದರೆ, ಎರಡನೇ ಅಲೆಯಲ್ಲಿ ಸೋಂಕು ತೀವ್ರವಾಗಿ ಹೆಚ್ಚುತ್ತಿದೆ. ಕಪ್ಪು ಶಿಲೀಂಧ್ರ ಮತ್ತು ಬಿಳಿ ಶಿಲೀಂಧ್ರದ ಸೋಂಕು ಕೂಡ ಆತಂಕ ಹುಟ್ಟಿಸಿವೆ. ಈ ಕುರಿತು ವಿದೇಶಗಳ ತಜ್ಞರೂ ಮಾತನಾಡುತ್ತಿದ್ದಾರೆ’ ಎಂದರು.</p>.<p>ಚುನಾವಣೆಯ ಬದಲಿಗೆ ಕೋವಿಡ್ ನಿರ್ವಹಣೆಗೆ ಪ್ರಧಾನಿ ಗಮನ ನೀಡಿದ್ದರೆ ಈ ಪರಿಸ್ಥಿತಿ ಉದ್ಭವಿಸುತ್ತಿರಲಿಲ್ಲ ಅನಿಸುತ್ತದೆ. ಈ ಬಾರಿ ಹೆಚ್ಚು ಸಮಸ್ಯೆ ಆಗಿರುವುದಕ್ಕೆ ಅದೇ ಕಾರಣ ಇರಬಹುದು ಎಂದು ಹೇಳಿದರು.</p>.<p>‘ಕೊರೊನಾ ನಿಯಂತ್ರಣದ ವಿಚಾರದಲ್ಲಿ ಪ್ರಧಾನಿ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು 12 ಸಲಹೆಗಳನ್ನು ನೀಡಿದ್ದೆ. ಅವುಗಳಲ್ಲಿ ಕೆಲವನ್ನು ಕಾರ್ಯಗತಗೊಳಿಸಿದ್ದಾರೆ. ರೆಮ್ಡಿಸಿವಿರ್ ಚುಚ್ಚುಮದ್ದು ಕಳ್ಳ ದಾರಿಯಲ್ಲಿ ಮಾರಾಟವಾಗುತ್ತಿದೆ. ಈ ವಿಚಾರದಲ್ಲಿ ಆಡಳಿತದಲ್ಲಿ ಕೆಲವು ಲೋಪಗಳು ಇರಬಹುದು. ಅದನ್ನು ಸರಿಪಡಿಸುವ ಕೆಲಸವನ್ನು ಸರ್ಕಾರ ತಕ್ಷಣ ಮಾಡಬೇಕು’ ಎಂದು ದೇವೇಗೌಡ ಒತ್ತಾಯಿಸಿದರು.</p>.<p><strong>ಕೇಂದ್ರದಿಂದ ತಾರತಮ್ಯ:</strong>‘ಲಸಿಕೆ, ಔಷಧಿ, ವೆಂಟಿಲೇಟರ್ ಮತ್ತು ಆಮ್ಲಜನಕ ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ತಾರತಮ್ಯ ಮಾಡುತ್ತಿದೆ ಎನ್ನುವ ವಿಚಾರದಲ್ಲಿ ಪ್ರಧಾನಿಗೆ ಪತ್ರ ಬರೆದಿದ್ದೇನೆ. ಎಚ್.ಡಿ. ಕುಮಾರಸ್ವಾಮಿ ಕೂಡ ಹಲವು ಬಾರಿ ಮಾತನಾಡಿದ್ದಾರೆ. ಹಣಕಾಸು ಹಂಚಿಕೆಯಲ್ಲೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡಿದೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪ್ರಧಾನಿ ನರೇಂದ್ರ ಮೋದಿ ಐದು ರಾಜ್ಯಗಳ ಚುನಾವಣೆಯಲ್ಲಿ ಗೆಲ್ಲಲೇಬೇಕು ಎಂಬ ಹಟಕ್ಕೆ ಬಿದ್ದು, ಕೊರೊನಾ ನಿಯಂತ್ರಣ ಮರೆತರು. ಅದರಿಂದಾಗಿಯೇ ದೇಶದಲ್ಲಿ ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹಬ್ಬಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಆರೋಪಿಸಿದರು.</p>.<p>ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ‘ಕೋವಿಡ್ ಮೊದಲ ಅಲೆಯನ್ನು ಮೋದಿ ಸಮರ್ಥವಾಗಿ ನಿಯಂತ್ರಿಸಿದ್ದಾರೆ ಎಂದು ಎಲ್ಲರೂ ಹೊಗಳಿದ್ದರು. ಆದರೆ, ಎರಡನೇ ಅಲೆಯಲ್ಲಿ ಸೋಂಕು ತೀವ್ರವಾಗಿ ಹೆಚ್ಚುತ್ತಿದೆ. ಕಪ್ಪು ಶಿಲೀಂಧ್ರ ಮತ್ತು ಬಿಳಿ ಶಿಲೀಂಧ್ರದ ಸೋಂಕು ಕೂಡ ಆತಂಕ ಹುಟ್ಟಿಸಿವೆ. ಈ ಕುರಿತು ವಿದೇಶಗಳ ತಜ್ಞರೂ ಮಾತನಾಡುತ್ತಿದ್ದಾರೆ’ ಎಂದರು.</p>.<p>ಚುನಾವಣೆಯ ಬದಲಿಗೆ ಕೋವಿಡ್ ನಿರ್ವಹಣೆಗೆ ಪ್ರಧಾನಿ ಗಮನ ನೀಡಿದ್ದರೆ ಈ ಪರಿಸ್ಥಿತಿ ಉದ್ಭವಿಸುತ್ತಿರಲಿಲ್ಲ ಅನಿಸುತ್ತದೆ. ಈ ಬಾರಿ ಹೆಚ್ಚು ಸಮಸ್ಯೆ ಆಗಿರುವುದಕ್ಕೆ ಅದೇ ಕಾರಣ ಇರಬಹುದು ಎಂದು ಹೇಳಿದರು.</p>.<p>‘ಕೊರೊನಾ ನಿಯಂತ್ರಣದ ವಿಚಾರದಲ್ಲಿ ಪ್ರಧಾನಿ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು 12 ಸಲಹೆಗಳನ್ನು ನೀಡಿದ್ದೆ. ಅವುಗಳಲ್ಲಿ ಕೆಲವನ್ನು ಕಾರ್ಯಗತಗೊಳಿಸಿದ್ದಾರೆ. ರೆಮ್ಡಿಸಿವಿರ್ ಚುಚ್ಚುಮದ್ದು ಕಳ್ಳ ದಾರಿಯಲ್ಲಿ ಮಾರಾಟವಾಗುತ್ತಿದೆ. ಈ ವಿಚಾರದಲ್ಲಿ ಆಡಳಿತದಲ್ಲಿ ಕೆಲವು ಲೋಪಗಳು ಇರಬಹುದು. ಅದನ್ನು ಸರಿಪಡಿಸುವ ಕೆಲಸವನ್ನು ಸರ್ಕಾರ ತಕ್ಷಣ ಮಾಡಬೇಕು’ ಎಂದು ದೇವೇಗೌಡ ಒತ್ತಾಯಿಸಿದರು.</p>.<p><strong>ಕೇಂದ್ರದಿಂದ ತಾರತಮ್ಯ:</strong>‘ಲಸಿಕೆ, ಔಷಧಿ, ವೆಂಟಿಲೇಟರ್ ಮತ್ತು ಆಮ್ಲಜನಕ ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ತಾರತಮ್ಯ ಮಾಡುತ್ತಿದೆ ಎನ್ನುವ ವಿಚಾರದಲ್ಲಿ ಪ್ರಧಾನಿಗೆ ಪತ್ರ ಬರೆದಿದ್ದೇನೆ. ಎಚ್.ಡಿ. ಕುಮಾರಸ್ವಾಮಿ ಕೂಡ ಹಲವು ಬಾರಿ ಮಾತನಾಡಿದ್ದಾರೆ. ಹಣಕಾಸು ಹಂಚಿಕೆಯಲ್ಲೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡಿದೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>