ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್,‘ ಮೊಗವೀರರ ಕುಲಕಸುಬು ಮೀನುಗಾರಿಕೆ. ಇತ್ತೀಚಿನ ವರ್ಷಗಳಲ್ಲಿ ಮತ್ಸ್ಯೋದ್ಯಮ ನೆಲಕಚ್ಚಿದೆ.ಚಂಡಮಾರುತಗಳ ಅಬ್ಬರ, ತೈಲ ದರ ಏರಿಕೆಯಿಂದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಮಾಡಲಾಗದೆ, ಶೇ 90ರಷ್ಟು ಮೀನುಗಾರರು ಸಂಕಷ್ಟದಲ್ಲಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.