ಎಸ್ಡಿಪಿಐ ನಿಷೇಧಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ಹೇಳಿಕೆ ಕುರಿತ ಪ್ರಶ್ನೆಗೆ ಉತ್ತರಿಸಿ ಅವರು, ಕೋಮುವಾದ ಮಾಡುವ ಯಾವುದೇ ಪಕ್ಷ ಜನರನ್ನು ಆಳಲು ಅನರ್ಹ. ನಾನು ಸ್ವತಃ ಹಿಂದೂ, ಆದರೆ ಹಿಂದುತ್ವಕ್ಕೆ ವಿರೋಧವಿದೆ. ಎಲ್ಲ ಜಾತಿ ಧರ್ಮದವರನ್ನು ಒಟ್ಟಿಗೆ ಕರೆದೊಯ್ಯಬೇಕು ಎಂದು ಸಂವಿಧಾನವೇ ಹೇಳಿದೆ. ಎಲ್ಲರನ್ನೂ ಮುನುಷ್ಯರಂತೆ ಕಾಣಬೇಕು ಎಂದು ಹೇಳಿದರು.