2021ರ ಆಗಸ್ಟ್ನಲ್ಲಿ ಜಮೀರ್ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿ ತನಿಖೆ ನಡೆಸಿತ್ತು. ಆ ಸಂದರ್ಭದಲ್ಲಿ ಶಾಸಕರ ಮನೆ ಸೇರಿದಂತೆ ಕೆಲವು ಆಸ್ತಿಗಳ ಮೌಲ್ಯಮಾಪನ ಮಾಡಿ ಇ.ಡಿ ಸಲ್ಲಿಸಿದ್ದ ವರದಿ ಆಧರಿಸಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪ್ರತ್ಯೇಕ ಪ್ರಕರಣ ದಾಖಲಿಸಿತ್ತು. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಎಫ್ಐಆರ್ ದಾಖಲಿಸಿದ್ದ ಎಸಿಬಿ, ಜಮೀರ್ಗೆ ಸಂಬಂಧಿಸಿದ ಐದು ಸ್ಥಳಗಳ ಮೇಲೆ 2022ರಲ್ಲಿ ಶೋಧ ನಡೆಸಿತ್ತು. ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಸಮೀಪದಲ್ಲಿರುವ ಜಮೀರ್ ಬಂಗಲೆ, ಸಿಲ್ವರ್ ಓಕ್ ಅಪಾರ್ಟ್ಮೆಂಟ್ನಲ್ಲಿರುವ ಫ್ಲ್ಯಾಟ್, ಸದಾಶಿವನಗರದಲ್ಲಿರುವ ಅತಿಥಿ ಗೃಹ, ಬನಶಂಕರಿಯಲ್ಲಿರುವ ಜಿ.ಕೆ. ಅಸೋಸಿಯೇಟ್ಸ್ ಕಚೇರಿ ಮತ್ತು ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿಗಳ ಮೇಲೆ ದಾಳಿ ನಡೆಸಲಾಗಿತ್ತು.