‘ಕೇಂದ್ರ ಸರ್ಕಾರವು ಮಂಕಿಪಾಕ್ಸ್ ನಿರ್ವಹಣೆ ಕುರಿತು ಮಾರ್ಗಸೂಚಿಯನ್ನು ಹೊರಡಿಸಿದೆ. ಶಂಕಿತ ಪ್ರಕರಣಗಳು ವರದಿಯಾದಾಗ ರೋಗಿಗಳನ್ನು ಪ್ರತ್ಯೇಕಿಸಿ, ಚಿಕಿತ್ಸೆ ನೀಡಲು ಜಿಲ್ಲಾ ಆಸ್ಪತ್ರೆಗಳಲ್ಲಿ ಕನಿಷ್ಠ ಎರಡು ಹಾಸಿಗೆಗಳನ್ನು ಮೀಸಲಿಡಬೇಕು. ಬೆಂಗಳೂರು ಮತ್ತು ದಕ್ಷಿಣ ಕನ್ನಡ ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ತಪಾಸಣೆ ನಡೆಸಬೇಕು. ಪ್ರಕರಣಗಳು ವರದಿಯಾದಲ್ಲಿ ಬೆಂಗಳೂರಿನಲ್ಲಿ ಇಂದಿರಾನಗರದ ಸಾಂಕ್ರಾಮಿಕ ಆಸ್ಪತ್ರೆ ಹಾಗೂ ಮಂಗಳೂರಿನಲ್ಲಿ ವೆನ್ಲಾಕ್ ಆಸ್ಪತ್ರೆಯನ್ನು ಪ್ರತ್ಯೇಕಿಸಿ, ಚಿಕಿತ್ಸೆ ಒದಗಿಸಬೇಕು’ ಎಂದು ಹೇಳಿದ್ದಾರೆ.