ಮೈಸೂರು ನಗರ ಹಾಗೂ ಜಿಲ್ಲೆಯ ನಂಜನಗೂಡು ಹಾಗೂ ತಿ.ನರಸೀಪುರ ತಾಲ್ಲೂಕುಗಳಲ್ಲಿ ಸೋಮವಾರ ತಡರಾತ್ರಿ ಗುಡುಗು, ಸಿಡಿಲು ಸಮೇತ ಧಾರಾಕಾರ ಮಳೆಯಾಗಿದೆ. ರಾತ್ರಿ 12.30ರಿಂದ ನಸುಕಿನವರೆಗೂ ಸುರಿಯಿತು.
ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳ ವಿವಿಧೆಡೆ ಮಂಗಳವಾರ ಗುಡುಗು ಸಹಿತ ಮಳೆಯಾಗಿದೆ. ಬಾಗಲಕೋಟೆ ಜಿಲ್ಲೆಯ ಕುಳಗೇರಿ ಹೋಬಳಿಯ ಸುತ್ತಮುತ್ತ ಭಾರಿ ಮಳೆಗೆ ಕೃಷಿ ಭೂಮಿಯಲ್ಲಿನ ಒಡ್ಡುಗಳು ಕಿತ್ತುಹೋಗಿವೆ.