ನವಲಗುಂದ ತಾಲ್ಲೂಕಿನ ತಡಹಾಳ ಗ್ರಾಮದ ಬೆಣ್ಣೆಹಳ್ಳದ ಸೇತುವೆ ಮೇಲಿಂದ ಬೈಕ್ ಆಯತಪ್ಪಿ ಹಳ್ಳಕ್ಕೆ ಬಿದ್ದು ಸವಾರರೊಬ್ಬರು ನಾಪತ್ತೆಯಾಗಿದ್ದಾರೆ. ಬೈಕ್ನಲ್ಲಿ ಸವಾರಿ ಮಾಡುತ್ತಿದ್ದ ಸದಾನಂದ ಮಾದರ, ಮತ್ತು ಶರಣಯ್ಯ ಹಿರೇಮಠ ಸೇತುವೆ ಮೇಲೆ ಸಾಗುವಾಗ ಆಯತಪ್ಪಿ ಬಿದ್ದಿದ್ದಾರೆ. ಸದಾನಂದ ಈಜು ಬಾರದೇ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ. ಶರಣಯ್ಯ ಈಜಿ ದಡ ಸೇರಿದ್ದಾರೆ.