ಕೋವಿಡ್ ನಿಯಂತ್ರಣಕ್ಕೆ ಬಿಗಿಯಾದ ಕ್ರಮ ಜಾರಿಗೊಳಿಸುವ ವಿಚಾರದಲ್ಲಿ ಜಾತ್ರೆ, ಪಾದಯಾತ್ರೆ, ಬಹಿರಂಗ ಸಭೆ ಯಾವುದನ್ನೂ ಪರಿಗಣಿಸುವುದಿಲ್ಲ. ಜನರ ಜೀವ ರಕ್ಷಣೆಯೇ ಸರ್ಕಾರದ ಮುಂದಿರುವ ಆದ್ಯತೆಯ ವಿಷಯ. ಕಾಂಗ್ರೆಸ್, ಜೆಡಿಎಸ್ ಪಕ್ಷದವರು ಏನಾದರೂ ಕಾರ್ಯಕ್ರಮ ಮಾಡಿಕೊಳ್ಳಲಿ. ಆದರೆ, ಜನರ ಜೀವ ರಕ್ಷಣೆಗಾಗಿ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದು ಅಶೋಕ ಹೇಳಿದರು.