ರಾಜ್ಯ ಸರ್ಕಾರವು ಬಿಪಿಎಲ್ ಕುಟುಂಬಗಳ ರೋಗಿಗಳಿಗಾಗಿ ಈ ಯೋಜನೆಯನ್ನು 2018ರಲ್ಲಿ ಆರಂಭಿ ಸಿತ್ತು. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಈ ಯೋಜನೆಯನ್ನು ನಿರ್ವಹಣೆ ಮಾಡುತ್ತಿದೆ. ಯೋಜನೆಯಡಿ ಯಕೃತ್ತು, ಮೂತ್ರಪಿಂಡ ಹಾಗೂ ಹೃದಯ ಸಮಸ್ಯೆ ಇರುವವರಿಗೆ ಕಸಿ ನಡೆಸಲಾಗುತ್ತದೆ. ಚಿಕಿತ್ಸಾ ವೆಚ್ಚವನ್ನು ಟ್ರಸ್ಟ್ ಭರಿಸುತ್ತಿದೆ.