ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

30 ಸಾವಿರಕ್ಕೂ ಹೆಚ್ಚು ಜಾನುವಾರು ರಕ್ಷಣೆ

Last Updated 28 ನವೆಂಬರ್ 2022, 18:57 IST
ಅಕ್ಷರ ಗಾತ್ರ

ಮಾಲೂರು (ಕೋಲಾರ ಜಿಲ್ಲೆ): ರಾಜ್ಯದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ, ಸಂರಕ್ಷಣಾ ಕಾಯ್ದೆ ಜಾರಿಗೆ ಬಂದ ಮೇಲೆ ರಾಜ್ಯದಲ್ಲಿ 30 ಸಾವಿರಕ್ಕೂ ಅಧಿಕ ಜಾನುವಾರುಗಳ ರಕ್ಷಣೆ ಮಾಡಲಾಗಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ತಿಳಿಸಿದರು.

ಸೋಮವಾರ ತಾಲ್ಲೂಕಿನ ಗಂಗಾಪುರ ಗ್ರಾಮದ ಗೋಶಾಲೆಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಪ್ರತಿ ಜಿಲ್ಲೆಯಲ್ಲೂ ಗೋಶಾಲೆ ಆರಂಭಿಸುತ್ತಿದೆ. ಪ್ರತಿ ಗೋಶಾಲೆಯಲ್ಲೂ ನೂರರಿಂದ ಸಾವಿರದವರೆಗೆ ಜಾನುವಾರು ರಕ್ಷಣೆ ಮಾಡಲಾಗಿದೆ ಎಂದರು.

‘ಚರ್ಮಗಂಟು ರೋಗದಿಂದ ರಾಜ್ಯದಲ್ಲಿ ಈವರೆಗೆ 10,413 ರಾಸು ಮೃತಪಟ್ಟಿವೆ. ಉಳಿದ ರಾಸುಗಳು ಚೇತರಿಸಿಕೊಂಡಿವೆ. ರೋಗ ನಿಯಂತ್ರಣಕ್ಕೆ ಲಸಿಕೆ ನೀಡುವುದು ಸೇರಿದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT