ಸಮರ್ಪಕ ನಿರ್ವಹಣೆ ಇಲ್ಲದ ಟ್ಯಾಂಕ್ನಿಂದ ಮನೆಗಳಿಗೆ ಸರಬರಾಜಾಗುವ ನೀರು ಸೇವಿಸಿದ ಪರಿಣಾಮ ಘಟನೆ ನಡೆದಿದೆ. ಪಟ್ಟಣದ ತಾಲ್ಲೂಕು ಆಸ್ಪತ್ರೆ, ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ತೆರೆಯಲಾಗಿದ್ದು, ಗ್ರಾಮಸ್ಥರ ಆರೋಗ್ಯ ತಪಾಸಣೆ ತಪಾಸಣೆ ನಡೆಸಲಾಗುತ್ತಿದೆ.