<p><strong>ಬೆಂಗಳೂರು: </strong>ಕಳೆದ ಮೂರು ತಿಂಗಳಲ್ಲಿ ಒಟ್ಟು 10.62 ಲಕ್ಷ ರೈತರಿಗೆ ₹681.90 ಕೋಟಿ ಪರಿಹಾರವನ್ನು ಅವರ ಖಾತೆಗೆ ಪಾವತಿ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.</p>.<p>ಬೆಳೆ ನಷ್ಟ ಪರಿಹಾರವನ್ನು ಕೋರಿ ಇನ್ನೂ ಅರ್ಜಿಗಳು ಸಲ್ಲಿಕೆಯಾಗುತ್ತಿವೆ ಎಂದು ಅವರು ಸುದ್ದಿಗಾರರಿಗೆ ಗುರುವಾರ ತಿಳಿಸಿದರು.</p>.<p>ತಂತ್ರಾಂಶದ ಮೂಲಕ ಮಾಹಿತಿ ಸಲ್ಲಿಸಿದ ಎರಡು– ಮೂರು ದಿನಗಳಲ್ಲೇ ರೈತರಿಗೆ ಹಣ ಪಾವತಿ ಮಾಡುವ ವ್ಯವಸ್ಥೆ ಇಡೀ ದೇಶದಲ್ಲಿ ಕರ್ನಾಟಕವೇ ಮೊದಲು. ಅತ್ಯಂತ ಕಡಿಮೆ ಸಮಯದಲ್ಲಿ ಹೆಚ್ಚು ರೈತರಿಗೆ ಪರಿಹಾರವನ್ನು ವಿತರಿಸಲಾಗಿದೆ. ಇದೊಂದು ದಾಖಲೆ ಎಂದು ಅವರು ಹೇಳಿದರು.</p>.<p>ಹಿಂದೆ ಅರ್ಜಿ ಸಲ್ಲಿಸಿದ ಬಳಿಕ ಪರಿಹಾರ ಪಡೆಯಲು ಆರು<br />ತಿಂಗಳಿಂದ ವರ್ಷ ಬೇಕಾಗುತ್ತಿತ್ತು. ಬುಧವಾರದವರೆಗೆ ಒಟ್ಟು 10,62,237 ರೈತರಿಗೆ ಪರಿಹಾರ ವಿತರಿಸ<br />ಲಾಗಿದೆ. ಕಳೆದ 21 ದಿನಗಳಲ್ಲಿ ₹551 ಕೋಟಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಅಶೋಕ ವಿವರಿಸಿದರು.</p>.<p class="Subhead"><strong>₹1,281 ಕೋಟಿಗೆ ಮನವಿ: </strong>ಮಳೆ ಮತ್ತು ಪ್ರವಾಹದಿಂದ ಉಂಟಾದ ಹಾನಿಗೆ ಎನ್ಡಿಆರ್ಎಫ್ ಅಡಿ ₹1,281 ಕೋಟಿ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ದೆಹಲಿಯಿಂದ ಅಧಿಕಾರಿಗಳ ತಂಡ ಬಂದು ನಷ್ಟದ ಅಂದಾಜು ಮಾಡಬೇಕಾಗಿದೆ.</p>.<p class="Subhead">ಮಳೆ ಮತ್ತು ಪ್ರವಾಹದಿಂದ ಉಂಟಾಗಿರುವ ಹಾನಿಯ ಬಗ್ಗೆ ವಿಡಿಯೋಗಳನ್ನು ಮಾಡಿಡಲಾಗಿದೆ. ಅಧಿಕಾರಿಗಳಿಗೆ ಅದನ್ನು ತೋರಿಸಿ ಬಳಿಕ ಸ್ಥಳ ಪರಿಶೀಲನೆಗೆ ಕರೆದೊಯ್ಯಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕಳೆದ ಮೂರು ತಿಂಗಳಲ್ಲಿ ಒಟ್ಟು 10.62 ಲಕ್ಷ ರೈತರಿಗೆ ₹681.90 ಕೋಟಿ ಪರಿಹಾರವನ್ನು ಅವರ ಖಾತೆಗೆ ಪಾವತಿ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.</p>.<p>ಬೆಳೆ ನಷ್ಟ ಪರಿಹಾರವನ್ನು ಕೋರಿ ಇನ್ನೂ ಅರ್ಜಿಗಳು ಸಲ್ಲಿಕೆಯಾಗುತ್ತಿವೆ ಎಂದು ಅವರು ಸುದ್ದಿಗಾರರಿಗೆ ಗುರುವಾರ ತಿಳಿಸಿದರು.</p>.<p>ತಂತ್ರಾಂಶದ ಮೂಲಕ ಮಾಹಿತಿ ಸಲ್ಲಿಸಿದ ಎರಡು– ಮೂರು ದಿನಗಳಲ್ಲೇ ರೈತರಿಗೆ ಹಣ ಪಾವತಿ ಮಾಡುವ ವ್ಯವಸ್ಥೆ ಇಡೀ ದೇಶದಲ್ಲಿ ಕರ್ನಾಟಕವೇ ಮೊದಲು. ಅತ್ಯಂತ ಕಡಿಮೆ ಸಮಯದಲ್ಲಿ ಹೆಚ್ಚು ರೈತರಿಗೆ ಪರಿಹಾರವನ್ನು ವಿತರಿಸಲಾಗಿದೆ. ಇದೊಂದು ದಾಖಲೆ ಎಂದು ಅವರು ಹೇಳಿದರು.</p>.<p>ಹಿಂದೆ ಅರ್ಜಿ ಸಲ್ಲಿಸಿದ ಬಳಿಕ ಪರಿಹಾರ ಪಡೆಯಲು ಆರು<br />ತಿಂಗಳಿಂದ ವರ್ಷ ಬೇಕಾಗುತ್ತಿತ್ತು. ಬುಧವಾರದವರೆಗೆ ಒಟ್ಟು 10,62,237 ರೈತರಿಗೆ ಪರಿಹಾರ ವಿತರಿಸ<br />ಲಾಗಿದೆ. ಕಳೆದ 21 ದಿನಗಳಲ್ಲಿ ₹551 ಕೋಟಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಅಶೋಕ ವಿವರಿಸಿದರು.</p>.<p class="Subhead"><strong>₹1,281 ಕೋಟಿಗೆ ಮನವಿ: </strong>ಮಳೆ ಮತ್ತು ಪ್ರವಾಹದಿಂದ ಉಂಟಾದ ಹಾನಿಗೆ ಎನ್ಡಿಆರ್ಎಫ್ ಅಡಿ ₹1,281 ಕೋಟಿ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ದೆಹಲಿಯಿಂದ ಅಧಿಕಾರಿಗಳ ತಂಡ ಬಂದು ನಷ್ಟದ ಅಂದಾಜು ಮಾಡಬೇಕಾಗಿದೆ.</p>.<p class="Subhead">ಮಳೆ ಮತ್ತು ಪ್ರವಾಹದಿಂದ ಉಂಟಾಗಿರುವ ಹಾನಿಯ ಬಗ್ಗೆ ವಿಡಿಯೋಗಳನ್ನು ಮಾಡಿಡಲಾಗಿದೆ. ಅಧಿಕಾರಿಗಳಿಗೆ ಅದನ್ನು ತೋರಿಸಿ ಬಳಿಕ ಸ್ಥಳ ಪರಿಶೀಲನೆಗೆ ಕರೆದೊಯ್ಯಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>