ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ, ನಿರ್ದೇಶಕರು, ಆಯುಕ್ತರು, ತುಮಕೂರು ಜಿಲ್ಲಾ ಆರೋಗ್ಯಾಧಿಕಾರಿ, ಜಿಲ್ಲಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು, ಜಿಲ್ಲಾ ಶಸ್ತ್ರಚಿಕಿತ್ಸಕರು, ಜಿಲ್ಲಾ ಆಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಮತ್ತು ಶುಶ್ರೂಷಾ ಅಧೀಕ್ಷಕರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಚಿಕಿತ್ಸೆ ನಿರಾಕರಿಸಿ ತಾಯಿ ಮತ್ತು ಅವಳಿ ಶಿಶುಗಳ ಸಾವಿಗೆ ಕಾರಣವಾದ ಆರೋಪದ ಕುರಿತು ಪ್ರತಿಕ್ರಿಯಿಸುವಂತೆ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೆ ಆದೇಶಿಸಲಾಗಿದೆ.