‘2015ರಲ್ಲಿ ಇಲ್ಲಿ ರಾಜು ಕೊಲೆಯಾಯ್ತು. ಆರೋಪಿಯನ್ನು ಪೊಲೀಸರು ಬಂಧಿಸಿದರು. ಆದರೆ, ನಗರ ಪೊಲೀಸ್ ಆಯುಕ್ತರನ್ನು ಎರಡೇ ತಿಂಗಳಲ್ಲೇ ವರ್ಗಾಯಿಸಲಾಯಿತು. ಆರೋಪಿಗೆ ಶಿಕ್ಷೆಯೇ ಆಗಲಿಲ್ಲ. ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜು ಕುಟುಂಬದರಿಗೆ ಸಾಂತ್ವನ ಹೇಳುವ ಕೆಲಸವನ್ನೂ ಮಾಡಲಿಲ್ಲ. ಕೆಎಫ್ಡಿ, ಪಿಎಫ್ಐ ಸಂಘಟನೆಯವರ ಮೇಲಿದ್ದ 175 ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ತೆಗೆದುಕೊಂಡು, ನಮ್ಮ ಎರಡು ಡಜನ್ ಕಾರ್ಯಕರ್ತರ ಸಾವಿಗೆ ಕಾರಣವಾದರು. ಅಂತಹ ಸಿದ್ದರಾಮಯ್ಯ ಮತ್ತೊಮ್ಮೆ ಅಧಿಕಾರ ಹಿಡಿಯಬೇಕು ಎಂದು ಹವಣಿಸುತ್ತಿದ್ದಾರೆ’ ಎಂದು ಟೀಕಿಸಿದರು.