<p><strong>ಬೆಂಗಳೂರು: </strong>ಬಿಜೆಪಿಗೆ ಹೆದರಿ ಕಾಂಗ್ರೆಸ್ನವರು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಗೌರವ ಸಲ್ಲಿಸಿದ್ದಾರೆ ಎಂದು ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಟೀಕಿಸಿದ್ದಾರೆ.</p>.<p>ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆ ಸಂದರ್ಭ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದ್ದು ಎನ್ನಲಾದ ವಿಡಿಯೊ ತುಣುಕೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಮಂಗಳವಾರ ವೈರಲ್ ಆಗಿತ್ತು. ಅದನ್ನು ಉಲ್ಲೇಖಿಸಿ ರೇಣುಕಾಚಾರ್ಯ ಟೀಕೆ ಮಾಡಿದ್ದಾರೆ.</p>.<p><strong>ವಿಡಿಯೊದಲ್ಲೇನಿದೆ?: </strong>ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವಣ ಪಿಸು ಮಾತಿನ ದೃಶ್ಯ ವಿಡಿಯೊದಲ್ಲಿದೆ. ಇಬ್ಬರೂ ನಾಯಕರ ಹಿಂಬದಿಯಲ್ಲಿ ಇಂದಿರಾ ಗಾಂಧಿಯವರ ಭಾವಚಿತ್ರವಿದೆ. ಡಿಕೆಶಿ ಅವರನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ‘ವಲ್ಲಭಭಾಯಿ ಪಟೇಲ್ ಅವರದ್ದೂ ಇವತ್ತು ಜನ್ಮದಿನವಂತೆ’ ಎಂದಿದ್ದಾರೆ. ಇದಕ್ಕುತ್ತರಿಸಿದ ಡಿಕೆಶಿ, ‘ಇದು ದಿನ (ಸ್ಮರಣೆ ಕಾರ್ಯಕ್ರಮ), ಅದು ಜನ್ಮದಿನ, ಫೋಟೊ ಇಡುವುದಿಲ್ಲ’ ಎಂದಿದ್ದಾರೆ. ಆದರೆ, ಬಿಜೆಪಿಯವರು ಇದರ ಲಾಭ ಪಡೆಯಬಹುದು ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ. ಬಳಿಕ ಡಿಕೆಶಿ ಅವರು ಪಟೇಲ್ ಅವರ ಭಾವಚಿತ್ರ ಇರಿಸಲು ಸೂಚಿಸುತ್ತಾರೆ.</p>.<p><strong>ಓದಿ:</strong><a href="https://www.prajavani.net/karnataka-news/congress-dk-shivakumar-what-was-in-salim-ugrappa-conversation-875514.html" target="_blank">ಡಿಕೆಶಿ ಪರ್ಸಂಟೇಜ್ ಸದ್ದು: ಸಲೀಂ–ಉಗ್ರಪ್ಪ ಸಂಭಾಷಣೆಯಲ್ಲಿ ಏನಿತ್ತು?</a></p>.<p>ಈ ಕುರಿತ ವೈರಲ್ ವಿಡಿಯೊವನ್ನು ಟ್ವಿಟರ್ನಲ್ಲಿ ಪೋಸ್ಟ್ ಮಾಡಿರುವ ರೇಣುಕಾಚಾರ್ಯ, ‘ಬಿಜೆಪಿಗೆ ಹೆದರಿ ಪಟೇಲರಿಗೆ ಗೌರವ ತೋರಿದ ಕಾಂಗ್ರೆಸ್ ನವರ ಕರ್ಮಕಥೆ’ ಎಂದು ಬರೆದಿದ್ದಾರೆ.</p>.<p>ಇತ್ತೀಚೆಗೆ ಕಾಂಗ್ರೆಸ್ ಮುಖಂಡರಾದ ವಿ.ಎಸ್. ಉಗ್ರಪ್ಪ ಮತ್ತು ಎಂ.ಎ. ಸಲೀಂ (ಈಗ ಪಕ್ಷದಿಂದ ಉಚ್ಚಾಟಿತರಾಗಿದ್ದಾರೆ) ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಗ್ಗೆ ನಡೆಸಿದ್ದ ಸಂಭಾಷಣೆಯ ತುಣುಕು ಸಾಮಾಜಿಕ ಜಾಲತಾಣಗಳು, ಟಿವಿ ಮಾಧ್ಯಮಗಳಲ್ಲಿ ವೈರಲ್ ಆಗಿ ಪಕ್ಷವು ಮುಜುಗರಕ್ಕೀಡಾಗುವಂತಾಗಿತ್ತು. ಡಿಕೆಶಿ ಅವರು ‘ಕುಡುಕ, ಕಮಿಷನ್ ಗಿರಾಕಿ’ ಎಂದೆಲ್ಲಾ ಸಲೀಂ ಹೇಳುತ್ತಿರುವುದು ವಿಡಿಯೊದಲ್ಲಿತ್ತು. ಬಳಿಕ ಸಲೀಂ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬಿಜೆಪಿಗೆ ಹೆದರಿ ಕಾಂಗ್ರೆಸ್ನವರು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಗೌರವ ಸಲ್ಲಿಸಿದ್ದಾರೆ ಎಂದು ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಟೀಕಿಸಿದ್ದಾರೆ.</p>.<p>ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆ ಸಂದರ್ಭ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದ್ದು ಎನ್ನಲಾದ ವಿಡಿಯೊ ತುಣುಕೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಮಂಗಳವಾರ ವೈರಲ್ ಆಗಿತ್ತು. ಅದನ್ನು ಉಲ್ಲೇಖಿಸಿ ರೇಣುಕಾಚಾರ್ಯ ಟೀಕೆ ಮಾಡಿದ್ದಾರೆ.</p>.<p><strong>ವಿಡಿಯೊದಲ್ಲೇನಿದೆ?: </strong>ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವಣ ಪಿಸು ಮಾತಿನ ದೃಶ್ಯ ವಿಡಿಯೊದಲ್ಲಿದೆ. ಇಬ್ಬರೂ ನಾಯಕರ ಹಿಂಬದಿಯಲ್ಲಿ ಇಂದಿರಾ ಗಾಂಧಿಯವರ ಭಾವಚಿತ್ರವಿದೆ. ಡಿಕೆಶಿ ಅವರನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ‘ವಲ್ಲಭಭಾಯಿ ಪಟೇಲ್ ಅವರದ್ದೂ ಇವತ್ತು ಜನ್ಮದಿನವಂತೆ’ ಎಂದಿದ್ದಾರೆ. ಇದಕ್ಕುತ್ತರಿಸಿದ ಡಿಕೆಶಿ, ‘ಇದು ದಿನ (ಸ್ಮರಣೆ ಕಾರ್ಯಕ್ರಮ), ಅದು ಜನ್ಮದಿನ, ಫೋಟೊ ಇಡುವುದಿಲ್ಲ’ ಎಂದಿದ್ದಾರೆ. ಆದರೆ, ಬಿಜೆಪಿಯವರು ಇದರ ಲಾಭ ಪಡೆಯಬಹುದು ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ. ಬಳಿಕ ಡಿಕೆಶಿ ಅವರು ಪಟೇಲ್ ಅವರ ಭಾವಚಿತ್ರ ಇರಿಸಲು ಸೂಚಿಸುತ್ತಾರೆ.</p>.<p><strong>ಓದಿ:</strong><a href="https://www.prajavani.net/karnataka-news/congress-dk-shivakumar-what-was-in-salim-ugrappa-conversation-875514.html" target="_blank">ಡಿಕೆಶಿ ಪರ್ಸಂಟೇಜ್ ಸದ್ದು: ಸಲೀಂ–ಉಗ್ರಪ್ಪ ಸಂಭಾಷಣೆಯಲ್ಲಿ ಏನಿತ್ತು?</a></p>.<p>ಈ ಕುರಿತ ವೈರಲ್ ವಿಡಿಯೊವನ್ನು ಟ್ವಿಟರ್ನಲ್ಲಿ ಪೋಸ್ಟ್ ಮಾಡಿರುವ ರೇಣುಕಾಚಾರ್ಯ, ‘ಬಿಜೆಪಿಗೆ ಹೆದರಿ ಪಟೇಲರಿಗೆ ಗೌರವ ತೋರಿದ ಕಾಂಗ್ರೆಸ್ ನವರ ಕರ್ಮಕಥೆ’ ಎಂದು ಬರೆದಿದ್ದಾರೆ.</p>.<p>ಇತ್ತೀಚೆಗೆ ಕಾಂಗ್ರೆಸ್ ಮುಖಂಡರಾದ ವಿ.ಎಸ್. ಉಗ್ರಪ್ಪ ಮತ್ತು ಎಂ.ಎ. ಸಲೀಂ (ಈಗ ಪಕ್ಷದಿಂದ ಉಚ್ಚಾಟಿತರಾಗಿದ್ದಾರೆ) ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಗ್ಗೆ ನಡೆಸಿದ್ದ ಸಂಭಾಷಣೆಯ ತುಣುಕು ಸಾಮಾಜಿಕ ಜಾಲತಾಣಗಳು, ಟಿವಿ ಮಾಧ್ಯಮಗಳಲ್ಲಿ ವೈರಲ್ ಆಗಿ ಪಕ್ಷವು ಮುಜುಗರಕ್ಕೀಡಾಗುವಂತಾಗಿತ್ತು. ಡಿಕೆಶಿ ಅವರು ‘ಕುಡುಕ, ಕಮಿಷನ್ ಗಿರಾಕಿ’ ಎಂದೆಲ್ಲಾ ಸಲೀಂ ಹೇಳುತ್ತಿರುವುದು ವಿಡಿಯೊದಲ್ಲಿತ್ತು. ಬಳಿಕ ಸಲೀಂ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>